Home / ಕವನ / ಕವಿತೆ / ವೇಮುಲನಿಗೊಂದು ಪ್ರಶ್ನೆ

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ
ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ.

ಇಲ್ಲದ ಮೂಲದಲ್ಲೇ ಹುಟ್ಟಿದರೂ
ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು
ಇದ್ದರಮನೆಯ ಮಾರಿ ತಿಂದವರು ಇಹರು
ಪರಿಪರಿಯ ಪಂಡಿತರು, ಪಾಮರರು,
ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು
ನಮ್ಮತನದ ಮೂಲ ಮಂತ್ರ. ವಿವಿಧತೆಯಲ್ಲಿ ಏಕತೆ
ರಾಷ್ಟ್ರ ಭಾವೈಕ್ಯತೆ
ಅಂಬೇಡ್ಕರ ನನಸಾದ ಕನಸಲ್ಲವೇ ಸಂವಿಧಾನ

ಓದಿಕೊಂಡಿರಲಿಲ್ಲವೇ ವೇಮುಲ
ನೀನು ಬಾಬಾ ಸಾಹೇಬರ?
ಓದಿದಿದ್ದರೆ ಓಡಿಹೋಗುತ್ತಿರಲಿಲ್ಲ
ಹೀಗೆ ಹೇಡಿಯಾಗಿ.
ಹೆತ್ತ ಹೊಟ್ಟೆಗೆ ಉರಿ‌ಅಟ್ಟಿ
ಬೇಯಿಸಿಕೊಳ್ಳುವುದಾದರೂ
ಏನಿತ್ತು ನಿನಗೆ?
ಹೆಸರಿಗಷ್ಟೇ ನೀನು ಹೋರಾಟಗಾರ ಅಂಬೇಡ್ಕರರಂತೆ ಎನಿಸಿಕೊಂಡೆ.
ಅವರ ನೋವಿನ ಹನಿ ರವವಷ್ಟೇ ಇರಬೇಕು
ನಿನಗೆ ತಗುಲಿದ ನೋವು
ಇರಲಿಲ್ಲ ಬಿಡು ನಿನ್ನಲ್ಲಿ ತಾಳಿಕೊಳ್ಳುವ
ತಾಕತ್ತು, ಅಪಮಾನ ಗೆಲ್ಲುವ ಗತ್ತು
ಇದ್ದರೆ ನೀನು ಮತ್ತೊಬ್ಬ ಬಾಬಾಸಾಹೇಬ ಆಗುತ್ತಿದ್ದೆ.
ಕೂಳನ್ನು ಕಸಿದುಕೊಂಡರಲ್ಲವೇ ಅವರು
ಅಸ್ಪೃಶ್ಯನೆಂದು ಕಪ್ಪು ಪಟ್ಟಿಯ ಸಿದ್ಧ ಮಾಡಿದರೆಂದೆ.
ಇತ್ತಿದ್ದರು ನೆಲೆ ನೀನು ಈ ನೆಲದ ಕುಡಿಯೆಂದು
ನಾಡ ಬೀಜವೆಂದು. ಉಗ್ರನಲ್ಲವೆಂದು
ವ್ಯಗ್ರನಾಗನೆಂದು.
ಹೊಟ್ಟೆಗೆ ಹಿಟ್ಟಿಲ್ಲದ ಹಟ್ಟಿಯಲ್ಲಿ ಹುಟ್ಟಿದೆ ನೀನು
ಹೋರಾಟದ ಬಿಂಬವ ಎದೆಯೊಳಗಿಟ್ಟುಕೊಂಡು
ತಣ್ಣೀರ ಬಟ್ಟೆ ಹೊಟ್ಟೆಗಿಟ್ಟು
ನಿನ್ನ ಮೆದುಳ ಪುಷ್ಟಿಗೊಳಿಸಬೇಕೆಂದರು ನಿನ್ನ
ಒಡಲಲ್ಲಿ ಹೊತ್ತವರು
ಅಡ್ಡಕಸುಬಿಗಳಿಗೆ ಅನುಯಾಯಿಯಾದೆ ನೀನು
ದೇಶ ಭಕ್ತಿಯ ಕುಡಿಗಳು ನೀವು
ದುಷ್ಟಸರ್ಪಗಳಿಗೇಕೆ ಹಾಲೆರೆದಿರಿ?
ಬದುಕಿದ್ದರೆ ಉತ್ತರಿಸುತ್ತಿದ್ದೆಯಾ?
ಅಥವಾ ಸರ್ಪಸಂಕುಲಕ್ಕೆ ಹಾಸುಗಂಬಳಿಯಾಗುತ್ತಿದ್ದೆಯಾ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...