Home / ಕವನ / ಕವಿತೆ / ವೇಮುಲನಿಗೊಂದು ಪ್ರಶ್ನೆ

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ
ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ.

ಇಲ್ಲದ ಮೂಲದಲ್ಲೇ ಹುಟ್ಟಿದರೂ
ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು
ಇದ್ದರಮನೆಯ ಮಾರಿ ತಿಂದವರು ಇಹರು
ಪರಿಪರಿಯ ಪಂಡಿತರು, ಪಾಮರರು,
ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು
ನಮ್ಮತನದ ಮೂಲ ಮಂತ್ರ. ವಿವಿಧತೆಯಲ್ಲಿ ಏಕತೆ
ರಾಷ್ಟ್ರ ಭಾವೈಕ್ಯತೆ
ಅಂಬೇಡ್ಕರ ನನಸಾದ ಕನಸಲ್ಲವೇ ಸಂವಿಧಾನ

ಓದಿಕೊಂಡಿರಲಿಲ್ಲವೇ ವೇಮುಲ
ನೀನು ಬಾಬಾ ಸಾಹೇಬರ?
ಓದಿದಿದ್ದರೆ ಓಡಿಹೋಗುತ್ತಿರಲಿಲ್ಲ
ಹೀಗೆ ಹೇಡಿಯಾಗಿ.
ಹೆತ್ತ ಹೊಟ್ಟೆಗೆ ಉರಿ‌ಅಟ್ಟಿ
ಬೇಯಿಸಿಕೊಳ್ಳುವುದಾದರೂ
ಏನಿತ್ತು ನಿನಗೆ?
ಹೆಸರಿಗಷ್ಟೇ ನೀನು ಹೋರಾಟಗಾರ ಅಂಬೇಡ್ಕರರಂತೆ ಎನಿಸಿಕೊಂಡೆ.
ಅವರ ನೋವಿನ ಹನಿ ರವವಷ್ಟೇ ಇರಬೇಕು
ನಿನಗೆ ತಗುಲಿದ ನೋವು
ಇರಲಿಲ್ಲ ಬಿಡು ನಿನ್ನಲ್ಲಿ ತಾಳಿಕೊಳ್ಳುವ
ತಾಕತ್ತು, ಅಪಮಾನ ಗೆಲ್ಲುವ ಗತ್ತು
ಇದ್ದರೆ ನೀನು ಮತ್ತೊಬ್ಬ ಬಾಬಾಸಾಹೇಬ ಆಗುತ್ತಿದ್ದೆ.
ಕೂಳನ್ನು ಕಸಿದುಕೊಂಡರಲ್ಲವೇ ಅವರು
ಅಸ್ಪೃಶ್ಯನೆಂದು ಕಪ್ಪು ಪಟ್ಟಿಯ ಸಿದ್ಧ ಮಾಡಿದರೆಂದೆ.
ಇತ್ತಿದ್ದರು ನೆಲೆ ನೀನು ಈ ನೆಲದ ಕುಡಿಯೆಂದು
ನಾಡ ಬೀಜವೆಂದು. ಉಗ್ರನಲ್ಲವೆಂದು
ವ್ಯಗ್ರನಾಗನೆಂದು.
ಹೊಟ್ಟೆಗೆ ಹಿಟ್ಟಿಲ್ಲದ ಹಟ್ಟಿಯಲ್ಲಿ ಹುಟ್ಟಿದೆ ನೀನು
ಹೋರಾಟದ ಬಿಂಬವ ಎದೆಯೊಳಗಿಟ್ಟುಕೊಂಡು
ತಣ್ಣೀರ ಬಟ್ಟೆ ಹೊಟ್ಟೆಗಿಟ್ಟು
ನಿನ್ನ ಮೆದುಳ ಪುಷ್ಟಿಗೊಳಿಸಬೇಕೆಂದರು ನಿನ್ನ
ಒಡಲಲ್ಲಿ ಹೊತ್ತವರು
ಅಡ್ಡಕಸುಬಿಗಳಿಗೆ ಅನುಯಾಯಿಯಾದೆ ನೀನು
ದೇಶ ಭಕ್ತಿಯ ಕುಡಿಗಳು ನೀವು
ದುಷ್ಟಸರ್ಪಗಳಿಗೇಕೆ ಹಾಲೆರೆದಿರಿ?
ಬದುಕಿದ್ದರೆ ಉತ್ತರಿಸುತ್ತಿದ್ದೆಯಾ?
ಅಥವಾ ಸರ್ಪಸಂಕುಲಕ್ಕೆ ಹಾಸುಗಂಬಳಿಯಾಗುತ್ತಿದ್ದೆಯಾ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...