Home / ಕವನ / ಹಾಯ್ಕು / ಹತ್ತು ಹಾಯ್ಕುಗಳು

ಹತ್ತು ಹಾಯ್ಕುಗಳು


ಈ ಕದಡಿದ ಕೊಳ ತಿಳಿಯಾಗುವುದಿಲ್ಲ.
ಯಾಕೆಂದರೆ ಅದು ಸ್ಫಟಿಕಜಲದಾಗರವಲ್ಲ
ಕೆಂಪು ಕೆಂಪು ಓಕುಳಿಯ ಸುರಿಸುವ ಸಂತೆ


ಬಿಳಿತೊಗಲಿನ ಗೋಡೆಯ ಮೇಲೆ
ಬೆಳೆಯುತ್ತಿದೆ ಊರು ನಗರ
ಕೆತ್ತಸಿಕೊಂಡ ಮುಖಗಳಲ್ಲಿ ಮಾರ್ದವತೆಯಿಲ್ಲ.


ತರು ಲತೆಗಳು ಅಲ್ಲಿಲ್ಲಿ ಬೋಳಿಸಿಕೊಂಡ
ಸುಂದರಾಂಗಿಯರು, ಕಾರ್ಬನ್ನಿನ ಕ್ರೀಮಿಗೆ
ಕಪ್ಪುಂಡು ಅಮವಾಸ್ಯೆಯ ಬಣ್ಣ.


ಶಾಂತಿಗಾಗಿ ಕ್ರಾಂತಿ ಎನ್ನುವ ಭ್ರಾಂತಿ.
ಜಾತಿಯಂತಕನ ನಾಲಿಗೆಗೆ
ಭಕ್ಷ ಭೋಜನ ರಕ್ತಸಿಂಚನ
ಆಂಧ್ರ ತೆಲಂಗಾಣ.
ಮರ್ಯಾದಾ ಹತ್ಯೆ ಬಾಣದ ಇನ್ನೊಂದು ತುದಿ.


ನೆರಳಿನಲ್ಲಿ ನೇಗಿಲು ಕಟ್ಟುವ ಜನ
ಮಹಡಿಯ ಮನೆಗಳಲ್ಲಿ ಮಿಂಚುವ ಮೋಹನಾಂಗಿಯರು
ಪವಿತ್ರತೆಗೆ ಹಲಬುತ್ತ ಒಳಗೊಳಗೆ ಪುಡಿಪುಡಿ


ಸಹನೆಗೆ ಉಪಸರ್ಗ ಬೆರೆಸಿ
ಬೆಳೆಸಿದ್ದೆ ತಪ್ಪಾಯ್ತೇ ಅಸಹನೆ ಈಗ
ವಿಷಯವ್ಯಾಪಿ. ವಿಶ್ವ ವ್ಯಾಪಿ.

೭.
ಅಲ್ಲಿ ಸಿಯಾಚಿನ್ನಲ್ಲಿ ಹೆತ್ತೊಡಲ ಮರೆತು
ಹೊತ್ತೊಡಲ ಋಣಹರಿಸಿ ಹುತಾತ್ಮರು
ಮಣ್ಣಬಯಕೆಗೆ ಹೊನ್ನಹೊದಿಕೆಗೆ
ಇಲ್ಲಿ ತಾಯ್ಗರ್ಭ ಸೀಳಿದರು.


ಕಗ್ಗತ್ತಲ ಕ್ಷಣಗಳಲ್ಲೆ ರಕ್ತ ಬೀಜಾಸುರರ
ಚಿತ್ರಗಳು ರೂಪಗೊಳ್ಳುತ್ತವೆ.
ಮದಿರೆ, ಮಾನಿನಿ, ಮಣ್ಣು ಮೋಕ್ಷಗೊಳ್ಳದ
ಮಂತ್ರಗಳು ಪ್ರಳಯಕಾಲದವರೆಗೂ


ಸರಕಾರಿಗಂಗಳದಿ ಉಣ್ಣುತ್ತಲೇ
ರಹಸ್ಯ ವರದಿ ಸರಕು ವ್ಯಾಪಾರ
ನೆರೆಮನೆಯ ದೊರೆಯಣ್ಣಗಳ ಮಾರುಕಟ್ಟೆಯಲ್ಲಿ ಬಿಸಿಬಿಸಿ
ಆದರೆ ಬಡಪಾಯಿ ವೇಮುಲಗೆ
ಕಟ್ಟಿದ್ದು ಬಹು ದೊಡ್ಡ ಪಟ್ಟ

೧೦
ಶತ ಶತಮಾನಗಳ ಚರಿತ್ರೆಯ ಚೀಲ
ತುಂಬಿಕೊಂಡಿದ್ದು ಬದಲಿಲ್ಲ.
ರಾಜಕಾರಣಕ್ಕೇನು? ಗೊತ್ತಿರುವುದಿಷ್ಟೇ
ತಮ್ಮವಾದದ ಶವಪೆಟ್ಟಿಗೆಗೆ ಹೆಣ ಯಾರದ್ದಾದರೇನು?
ಮೊಳೆ ಹೊಡೆದು ಸಿದ್ಧಮಾಡುವುದೇ ಪರಮಗುರಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...