Home / ಕವನ / ಹಾಯ್ಕು / ಹತ್ತು ಹಾಯ್ಕುಗಳು

ಹತ್ತು ಹಾಯ್ಕುಗಳು


ಈ ಕದಡಿದ ಕೊಳ ತಿಳಿಯಾಗುವುದಿಲ್ಲ.
ಯಾಕೆಂದರೆ ಅದು ಸ್ಫಟಿಕಜಲದಾಗರವಲ್ಲ
ಕೆಂಪು ಕೆಂಪು ಓಕುಳಿಯ ಸುರಿಸುವ ಸಂತೆ


ಬಿಳಿತೊಗಲಿನ ಗೋಡೆಯ ಮೇಲೆ
ಬೆಳೆಯುತ್ತಿದೆ ಊರು ನಗರ
ಕೆತ್ತಸಿಕೊಂಡ ಮುಖಗಳಲ್ಲಿ ಮಾರ್ದವತೆಯಿಲ್ಲ.


ತರು ಲತೆಗಳು ಅಲ್ಲಿಲ್ಲಿ ಬೋಳಿಸಿಕೊಂಡ
ಸುಂದರಾಂಗಿಯರು, ಕಾರ್ಬನ್ನಿನ ಕ್ರೀಮಿಗೆ
ಕಪ್ಪುಂಡು ಅಮವಾಸ್ಯೆಯ ಬಣ್ಣ.


ಶಾಂತಿಗಾಗಿ ಕ್ರಾಂತಿ ಎನ್ನುವ ಭ್ರಾಂತಿ.
ಜಾತಿಯಂತಕನ ನಾಲಿಗೆಗೆ
ಭಕ್ಷ ಭೋಜನ ರಕ್ತಸಿಂಚನ
ಆಂಧ್ರ ತೆಲಂಗಾಣ.
ಮರ್ಯಾದಾ ಹತ್ಯೆ ಬಾಣದ ಇನ್ನೊಂದು ತುದಿ.


ನೆರಳಿನಲ್ಲಿ ನೇಗಿಲು ಕಟ್ಟುವ ಜನ
ಮಹಡಿಯ ಮನೆಗಳಲ್ಲಿ ಮಿಂಚುವ ಮೋಹನಾಂಗಿಯರು
ಪವಿತ್ರತೆಗೆ ಹಲಬುತ್ತ ಒಳಗೊಳಗೆ ಪುಡಿಪುಡಿ


ಸಹನೆಗೆ ಉಪಸರ್ಗ ಬೆರೆಸಿ
ಬೆಳೆಸಿದ್ದೆ ತಪ್ಪಾಯ್ತೇ ಅಸಹನೆ ಈಗ
ವಿಷಯವ್ಯಾಪಿ. ವಿಶ್ವ ವ್ಯಾಪಿ.

೭.
ಅಲ್ಲಿ ಸಿಯಾಚಿನ್ನಲ್ಲಿ ಹೆತ್ತೊಡಲ ಮರೆತು
ಹೊತ್ತೊಡಲ ಋಣಹರಿಸಿ ಹುತಾತ್ಮರು
ಮಣ್ಣಬಯಕೆಗೆ ಹೊನ್ನಹೊದಿಕೆಗೆ
ಇಲ್ಲಿ ತಾಯ್ಗರ್ಭ ಸೀಳಿದರು.


ಕಗ್ಗತ್ತಲ ಕ್ಷಣಗಳಲ್ಲೆ ರಕ್ತ ಬೀಜಾಸುರರ
ಚಿತ್ರಗಳು ರೂಪಗೊಳ್ಳುತ್ತವೆ.
ಮದಿರೆ, ಮಾನಿನಿ, ಮಣ್ಣು ಮೋಕ್ಷಗೊಳ್ಳದ
ಮಂತ್ರಗಳು ಪ್ರಳಯಕಾಲದವರೆಗೂ


ಸರಕಾರಿಗಂಗಳದಿ ಉಣ್ಣುತ್ತಲೇ
ರಹಸ್ಯ ವರದಿ ಸರಕು ವ್ಯಾಪಾರ
ನೆರೆಮನೆಯ ದೊರೆಯಣ್ಣಗಳ ಮಾರುಕಟ್ಟೆಯಲ್ಲಿ ಬಿಸಿಬಿಸಿ
ಆದರೆ ಬಡಪಾಯಿ ವೇಮುಲಗೆ
ಕಟ್ಟಿದ್ದು ಬಹು ದೊಡ್ಡ ಪಟ್ಟ

೧೦
ಶತ ಶತಮಾನಗಳ ಚರಿತ್ರೆಯ ಚೀಲ
ತುಂಬಿಕೊಂಡಿದ್ದು ಬದಲಿಲ್ಲ.
ರಾಜಕಾರಣಕ್ಕೇನು? ಗೊತ್ತಿರುವುದಿಷ್ಟೇ
ತಮ್ಮವಾದದ ಶವಪೆಟ್ಟಿಗೆಗೆ ಹೆಣ ಯಾರದ್ದಾದರೇನು?
ಮೊಳೆ ಹೊಡೆದು ಸಿದ್ಧಮಾಡುವುದೇ ಪರಮಗುರಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...