Home / ಕವನ / ಹಾಯ್ಕು / ಹತ್ತು ಹಾಯ್ಕುಗಳು

ಹತ್ತು ಹಾಯ್ಕುಗಳು


ಈ ಕದಡಿದ ಕೊಳ ತಿಳಿಯಾಗುವುದಿಲ್ಲ.
ಯಾಕೆಂದರೆ ಅದು ಸ್ಫಟಿಕಜಲದಾಗರವಲ್ಲ
ಕೆಂಪು ಕೆಂಪು ಓಕುಳಿಯ ಸುರಿಸುವ ಸಂತೆ


ಬಿಳಿತೊಗಲಿನ ಗೋಡೆಯ ಮೇಲೆ
ಬೆಳೆಯುತ್ತಿದೆ ಊರು ನಗರ
ಕೆತ್ತಸಿಕೊಂಡ ಮುಖಗಳಲ್ಲಿ ಮಾರ್ದವತೆಯಿಲ್ಲ.


ತರು ಲತೆಗಳು ಅಲ್ಲಿಲ್ಲಿ ಬೋಳಿಸಿಕೊಂಡ
ಸುಂದರಾಂಗಿಯರು, ಕಾರ್ಬನ್ನಿನ ಕ್ರೀಮಿಗೆ
ಕಪ್ಪುಂಡು ಅಮವಾಸ್ಯೆಯ ಬಣ್ಣ.


ಶಾಂತಿಗಾಗಿ ಕ್ರಾಂತಿ ಎನ್ನುವ ಭ್ರಾಂತಿ.
ಜಾತಿಯಂತಕನ ನಾಲಿಗೆಗೆ
ಭಕ್ಷ ಭೋಜನ ರಕ್ತಸಿಂಚನ
ಆಂಧ್ರ ತೆಲಂಗಾಣ.
ಮರ್ಯಾದಾ ಹತ್ಯೆ ಬಾಣದ ಇನ್ನೊಂದು ತುದಿ.


ನೆರಳಿನಲ್ಲಿ ನೇಗಿಲು ಕಟ್ಟುವ ಜನ
ಮಹಡಿಯ ಮನೆಗಳಲ್ಲಿ ಮಿಂಚುವ ಮೋಹನಾಂಗಿಯರು
ಪವಿತ್ರತೆಗೆ ಹಲಬುತ್ತ ಒಳಗೊಳಗೆ ಪುಡಿಪುಡಿ


ಸಹನೆಗೆ ಉಪಸರ್ಗ ಬೆರೆಸಿ
ಬೆಳೆಸಿದ್ದೆ ತಪ್ಪಾಯ್ತೇ ಅಸಹನೆ ಈಗ
ವಿಷಯವ್ಯಾಪಿ. ವಿಶ್ವ ವ್ಯಾಪಿ.

೭.
ಅಲ್ಲಿ ಸಿಯಾಚಿನ್ನಲ್ಲಿ ಹೆತ್ತೊಡಲ ಮರೆತು
ಹೊತ್ತೊಡಲ ಋಣಹರಿಸಿ ಹುತಾತ್ಮರು
ಮಣ್ಣಬಯಕೆಗೆ ಹೊನ್ನಹೊದಿಕೆಗೆ
ಇಲ್ಲಿ ತಾಯ್ಗರ್ಭ ಸೀಳಿದರು.


ಕಗ್ಗತ್ತಲ ಕ್ಷಣಗಳಲ್ಲೆ ರಕ್ತ ಬೀಜಾಸುರರ
ಚಿತ್ರಗಳು ರೂಪಗೊಳ್ಳುತ್ತವೆ.
ಮದಿರೆ, ಮಾನಿನಿ, ಮಣ್ಣು ಮೋಕ್ಷಗೊಳ್ಳದ
ಮಂತ್ರಗಳು ಪ್ರಳಯಕಾಲದವರೆಗೂ


ಸರಕಾರಿಗಂಗಳದಿ ಉಣ್ಣುತ್ತಲೇ
ರಹಸ್ಯ ವರದಿ ಸರಕು ವ್ಯಾಪಾರ
ನೆರೆಮನೆಯ ದೊರೆಯಣ್ಣಗಳ ಮಾರುಕಟ್ಟೆಯಲ್ಲಿ ಬಿಸಿಬಿಸಿ
ಆದರೆ ಬಡಪಾಯಿ ವೇಮುಲಗೆ
ಕಟ್ಟಿದ್ದು ಬಹು ದೊಡ್ಡ ಪಟ್ಟ

೧೦
ಶತ ಶತಮಾನಗಳ ಚರಿತ್ರೆಯ ಚೀಲ
ತುಂಬಿಕೊಂಡಿದ್ದು ಬದಲಿಲ್ಲ.
ರಾಜಕಾರಣಕ್ಕೇನು? ಗೊತ್ತಿರುವುದಿಷ್ಟೇ
ತಮ್ಮವಾದದ ಶವಪೆಟ್ಟಿಗೆಗೆ ಹೆಣ ಯಾರದ್ದಾದರೇನು?
ಮೊಳೆ ಹೊಡೆದು ಸಿದ್ಧಮಾಡುವುದೇ ಪರಮಗುರಿ
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...