Home / ಕವನ / ಹಾಯ್ಕು / ಹತ್ತು ಹಾಯ್ಕುಗಳು

ಹತ್ತು ಹಾಯ್ಕುಗಳು


ಈ ಕದಡಿದ ಕೊಳ ತಿಳಿಯಾಗುವುದಿಲ್ಲ.
ಯಾಕೆಂದರೆ ಅದು ಸ್ಫಟಿಕಜಲದಾಗರವಲ್ಲ
ಕೆಂಪು ಕೆಂಪು ಓಕುಳಿಯ ಸುರಿಸುವ ಸಂತೆ


ಬಿಳಿತೊಗಲಿನ ಗೋಡೆಯ ಮೇಲೆ
ಬೆಳೆಯುತ್ತಿದೆ ಊರು ನಗರ
ಕೆತ್ತಸಿಕೊಂಡ ಮುಖಗಳಲ್ಲಿ ಮಾರ್ದವತೆಯಿಲ್ಲ.


ತರು ಲತೆಗಳು ಅಲ್ಲಿಲ್ಲಿ ಬೋಳಿಸಿಕೊಂಡ
ಸುಂದರಾಂಗಿಯರು, ಕಾರ್ಬನ್ನಿನ ಕ್ರೀಮಿಗೆ
ಕಪ್ಪುಂಡು ಅಮವಾಸ್ಯೆಯ ಬಣ್ಣ.


ಶಾಂತಿಗಾಗಿ ಕ್ರಾಂತಿ ಎನ್ನುವ ಭ್ರಾಂತಿ.
ಜಾತಿಯಂತಕನ ನಾಲಿಗೆಗೆ
ಭಕ್ಷ ಭೋಜನ ರಕ್ತಸಿಂಚನ
ಆಂಧ್ರ ತೆಲಂಗಾಣ.
ಮರ್ಯಾದಾ ಹತ್ಯೆ ಬಾಣದ ಇನ್ನೊಂದು ತುದಿ.


ನೆರಳಿನಲ್ಲಿ ನೇಗಿಲು ಕಟ್ಟುವ ಜನ
ಮಹಡಿಯ ಮನೆಗಳಲ್ಲಿ ಮಿಂಚುವ ಮೋಹನಾಂಗಿಯರು
ಪವಿತ್ರತೆಗೆ ಹಲಬುತ್ತ ಒಳಗೊಳಗೆ ಪುಡಿಪುಡಿ


ಸಹನೆಗೆ ಉಪಸರ್ಗ ಬೆರೆಸಿ
ಬೆಳೆಸಿದ್ದೆ ತಪ್ಪಾಯ್ತೇ ಅಸಹನೆ ಈಗ
ವಿಷಯವ್ಯಾಪಿ. ವಿಶ್ವ ವ್ಯಾಪಿ.

೭.
ಅಲ್ಲಿ ಸಿಯಾಚಿನ್ನಲ್ಲಿ ಹೆತ್ತೊಡಲ ಮರೆತು
ಹೊತ್ತೊಡಲ ಋಣಹರಿಸಿ ಹುತಾತ್ಮರು
ಮಣ್ಣಬಯಕೆಗೆ ಹೊನ್ನಹೊದಿಕೆಗೆ
ಇಲ್ಲಿ ತಾಯ್ಗರ್ಭ ಸೀಳಿದರು.


ಕಗ್ಗತ್ತಲ ಕ್ಷಣಗಳಲ್ಲೆ ರಕ್ತ ಬೀಜಾಸುರರ
ಚಿತ್ರಗಳು ರೂಪಗೊಳ್ಳುತ್ತವೆ.
ಮದಿರೆ, ಮಾನಿನಿ, ಮಣ್ಣು ಮೋಕ್ಷಗೊಳ್ಳದ
ಮಂತ್ರಗಳು ಪ್ರಳಯಕಾಲದವರೆಗೂ


ಸರಕಾರಿಗಂಗಳದಿ ಉಣ್ಣುತ್ತಲೇ
ರಹಸ್ಯ ವರದಿ ಸರಕು ವ್ಯಾಪಾರ
ನೆರೆಮನೆಯ ದೊರೆಯಣ್ಣಗಳ ಮಾರುಕಟ್ಟೆಯಲ್ಲಿ ಬಿಸಿಬಿಸಿ
ಆದರೆ ಬಡಪಾಯಿ ವೇಮುಲಗೆ
ಕಟ್ಟಿದ್ದು ಬಹು ದೊಡ್ಡ ಪಟ್ಟ

೧೦
ಶತ ಶತಮಾನಗಳ ಚರಿತ್ರೆಯ ಚೀಲ
ತುಂಬಿಕೊಂಡಿದ್ದು ಬದಲಿಲ್ಲ.
ರಾಜಕಾರಣಕ್ಕೇನು? ಗೊತ್ತಿರುವುದಿಷ್ಟೇ
ತಮ್ಮವಾದದ ಶವಪೆಟ್ಟಿಗೆಗೆ ಹೆಣ ಯಾರದ್ದಾದರೇನು?
ಮೊಳೆ ಹೊಡೆದು ಸಿದ್ಧಮಾಡುವುದೇ ಪರಮಗುರಿ
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...