Home / ಕವನ / ಕವಿತೆ / ಅಪ್ಪ ಕೊಡಿಸಿದ ಅಂಗಿ

ಅಪ್ಪ ಕೊಡಿಸಿದ ಅಂಗಿ

ಅದು ನನ್ನದಲ್ಲದ ಅಂಗಿ
ಅದರೆ ಇಂಚಿಂಚೂ ಮೆಚ್ಚುಗೆ ಆದದ್ದು ಸುಳ್ಳಲ್ಲ.
ಬಯಸಿದ್ದು ಕನವರಿಸಿದ್ದು ಅದಕ್ಕಾಗೇ
ಇಲ್ಲ, ಬಿಟ್ಟುಬಿಡು, ನಿನ್ನ ಮೈಬಣ್ಣಕ್ಕೆ ಒಪ್ಪಿಗೆಯಾಗದು
ಅಮ್ಮನ ತಕರಾರು.
ಮುನಿಸಿಕೊಂಡೆ, ಮಾತು ಬಿಟ್ಟೆ, ಮತ್ತೆ ಮತ್ತೆ ನೋಡಿಬಂದೆ.
ಕಿವಿಗಿಳಿದರೂ ಕಾದ ಸೀಸ.

ಬಣ್ಣದ ಅಂಗಿಯ ಮೋಹ ಬೇಡ
ಎನ್ನುತ್ತ ಲಗುಬಗೆಯಿಂದ ಅಪ್ಪ ನನಗೆಂದೇ
ಒಂದಂಗಿ ಕೊಡಿಸಿಬಿಟ್ಟರು.
ಬಾಳಿಕೆಗೆ ಬರವಿಲ್ಲ
ಕಾಲಕ್ಕೂ ಕಷ್ಟಕ್ಕೂ ಜೊತೆಯಾಗಿ
ನನ್ನ ಮೈಗಂಟಿಕೊಂಡೆ ಕಾಯುತ್ತದೆ ಎಂದೆನ್ನುತ.

ಬರಬರುತ್ತ ಅಂಗಿ ಮೇಲೆ ಆಸೆ ತಾನೆ ತಾನೆ ನನಗೂ
ಒಮ್ಮೆ ತೊಟ್ಟರೂ ಮತ್ತೆ ಮತ್ತೆ ತೊಡುವಾಸೆ
ಆ ಅಂಗಿ ಬಿಟ್ಟರೆ ಬೇರೆ ಗತಿಯಿಲ್ಲ
ನನ್ನ ತೊಗಲಿಗೆ ಅಂಟಿಕೊಂಡಂತೆ ಅಂಗಿ.

ಅಂಗಿಗೂ ನಾನೆಂದರೆ ಅಷ್ಟಕಷ್ಟೆ ಮೊದಮೊದಲು
ದಿಕ್ಕೆಟ್ಟ ದರ್ಪದ ಧಿಮಾಕು
ಕಳಚಿ ಇಟ್ಟಾಗಲೆಲ್ಲ ಸ್ವಚ್ಛಂದ ಹಾರಾಟ.

ಈಗೀಗ ಅದಕ್ಕೂ ಏನೋ ಅನುಬಂಧ
ನನ್ನ ಮೈಗಂಟಿಕೊಂಡೆ ಇರುತ್ತದೆ
ಒಳಗೊಳಗೆ ಕಚಗುಳಿ ಇಡುತ್ತ, ನನ್ನನ್ನೆ ಮೆಚ್ಚುತ್ತ
ಅಂಗಿಗೆ ನನ್ನೆಲ್ಲವನ್ನೂ ಒಳಗೊಳ್ಳುವ ತಾಕತ್ತಿದೆ.
ಒಳಹರವು ಚೆನ್ನಾಗಿದೆ. ಸಣ್ಣಪುಟ್ಟ ಮಳೆಗೆ ಧೃತಿಗೆಡದು.
ಬಿಸಿಲಿಗೆ ಬಣ್ಣಗೆಡದು.

ಕಾಯ್ದುಕೋ ಕಾಳಜಿಯಿಂದ
ಅಸಡ್ಡೆ ಮಾಡಿದರೆ, ಬೇಕೆಂದರಲ್ಲಿ ಕಳಚಿ ಇಟ್ಟರೆ
ಹಾರಿಹೋದೀತು ಎಚ್ಚರಿಸಿದ್ದಳು ಅಮ್ಮ
ಈಗ ನಾನೂ ಅಷ್ಟೇ
ಬೆಲೆಬಾಳುವ ಬಣ್ಣದ ಅಂಗಿಗಳಿಗಿಂತ
ದೀರ್ಘಬಾಳಿಕೆಯ ಇಂತಹ ಅಂಗಿಯ
ಹುಡುಕಾಟದಲ್ಲಿದ್ದೇನೆ ನನ್ನ ಮಗಳಿಗೂ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...