Home / ಕವನ / ಕವಿತೆ / ತಟ್ಟಿಯೊಳಗಿನ ಹಾಡು

ತಟ್ಟಿಯೊಳಗಿನ ಹಾಡು

ನನ್ನ ಕೊಟ್ಟಿದ್ದು ಉಪ್ಪುಗಂಜಿಗೂ
ತತ್ವಾರ ತಟ್ಟಿ ತಬ್ಬಲಿಯ ಗೂಡು
ಎಂದು ನಿಟ್ಟುಸಿರೇ ಉಸಿರಾಗಿತ್ತು.

ಬೆಟ್ಟಕ್ಕೆ ಹೋಗಿ ಸೊಪ್ಪು ತರುವಾಗಿನ
ಸಮಯವೆಲ್ಲಾ ಹನಿಹನಿಯ ಉದುರಿಸಿ
ನಯನಗಳು ಕೊಳಗಳಾಗಿತ್ತು.

ಸೆಗಣಿ ಸಾರಿಸಿ ತೆಗೆದು ಗಂಜಳ ಬಗೆದು
ಬೆರಣಿ ತಟ್ಟಿಟ್ಟು, ಅಕ್ಕಚ್ಚು ಬಾನಿಗೆ ಹೊಯ್ದು
ಎಮ್ಮೆ ಮೇಯಿಸ ಹೊರಟರೆ
ದಾಂಬು ಬಿಚ್ಚುವ ತ್ವರೆಗೆ
ಕೈಬಳೆಯ ಗಾಜುನಟ್ಟಿತ್ತು
ಮುಂಗೈಯ ಸೆರೆಯುಬ್ಬಿ ರಕ್ತ ಒಸರಿತ್ತು

ಏರುಗುಡ್ಡವ ಹತ್ತಿ
ತರಕ ರಾಶಿಯ ಗುಡಿಸಿ ಕಲ್ಲಿತುಂಬಿಸಿಕೊಂಡು
ಇಳಿಜಾರಿಗೆ ಊರುಗೋಲನು ಹಿಡಿದು
ಹೊತ್ತು ಬರುವಾಗ ಎಡಗಾಲು ಎಡವಿ
ಬಾತುಕೊಂಡಿತ್ತು

ಮನೆಯ ಹೊಲೆಯನು ತೊಳೆದು
ಒಲೆಗೆ ಉರಿಯನು ಹಚ್ಚಿ ಗಂಜಿ ಬೇಯಿಸಿ
ದುಡಿದು [ಕುಡಿದು] ಬರುವ ಗಂಡನಿಗಾಗಿ
ನಾ ಹೈರಾಣು ಹೆಣವಾಗಿ
ಕಾದು ಕೂತಿದ್ದೆ.

ಆಗಸದ ಅಂಚಿನ ಮಂಜಿನ ಪೊರೆ
ಎಂದಿಗೆ ಕಳಚಿ ಬೀಳುವುದು
ಸುಟ್ಟ ಚರ್ಮದ ಕಲೆಯು ಎಂತು
ಮಾಯುವುದು ಕಾಯುತ್ತಿದ್ದೆ,
ಕಾಯುತ್ತಲೇ ಇದ್ದೇನೆ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...