Home / ಕವನ / ಕವಿತೆ / ಶೂನ್ಯದ ಮೋಹ

ಶೂನ್ಯದ ಮೋಹ

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ
ಆಕಾರದ ಸಂಖ್ಯೆಗಳು ಮುಖಬಲೆಗಳು,
ಸ್ಥಾನಬೆಲೆಗಳು ಗೋಜಲಿನ ಗೂಡನ್ನು
ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ
ಶೂನ್ಯಕ್ಕೆ ಶರಣಾಗುತ್ತದೆ ಮನ.

ಅಸ್ಮಿತೆಯ ಹಂಗೇ ಇಲ್ಲದೇ
ಮನೆಯಂಗಳದ ಮೂಲೆಯಲ್ಲಿ
ಅಡಿಕೆ ಸಿಪ್ಪೆ ಸುಲಿಸುಲಿದು
ಒಟ್ಟುಮಾಡುವ ಪಾರೋತಿ,
ನೆನಪಾಗುತ್ತ ನೆಲದ ಚಿಗುರೇ
ಅವಳಾದಂತೆ ಕನಸು
ಅಪ್ಪಟ ಮುಖವನ್ನೊಮ್ಮೆ ಮುದ್ದಿಸಬಯಸುತ್ತದೆ ಮನ.

ತ್ರಿಕರಣ ಶುದ್ಧತೆ ಪದ ಕೇಳದೆಯೂ
ಅದರ ತಾದ್ಯಾತ್ಮಸ್ವರೂಪಿಯೇ
ಆದ ಮಾದ
ತೆಂಗಿನಕಾಯಿ ಸಿಪ್ಪೆ ಸುಲಿಸುಲಿದು
ತೆಗೆಯುತ್ತಾ ಆಗಾಗ ಹೂಂಕರಿಸುತ್ತಾ
ಕತ್ತಿಯ ಸಿದ್ಧಿಯಲ್ಲಿ ತನ್ಮಯನಾಗುತ್ತಿದ್ದುದು
ನೆನಪಾಗುತ್ತ
ಅವನೆಂದರೆ ಬೆಳಕಿನ ಪುಂಜ ಎನ್ನಿಸುತ್ತದೆ.
ಆ ಕತ್ತಿಯ ಸಿದ್ಧಿಯ ಕರಗತಕ್ಕೆಳೆಸುತ್ತದೆ ಮನ

ಕೊಡಲೇನೂ ಇಲ್ಲ,
ಕಣ್ಣ ಮಧುರ ಮೈತ್ರಿಯ ಕಂಪು ಬಿಟ್ಟು
ಇಲ್ಲದ ಕಡೆಗಳಲ್ಲಿ ಅರಳುವ ಹೃದಯದ ಪರಿಮಳ
ಚಕ್ಷುವಿನ ಕಾಂತಿಗೆ ಬೆರಗಾಗುತ್ತದೆ ಮನ.

ತಳತಳಿಸುವ ಬೂಟು ಶೂಗಳ
ತೊಟ್ಟ ಪಾರಿನ್ ರಿಟರ್ನ್‍ಡ್ಗಳ
ವಿಚಿತ್ರ ಅಕ್ಸೆಂಟ್ಗಳ ಭಯಂಕರ ಹಾವಭಾವದ
ಮೈಕುಣಿತದ ಭಾಷೆಗಳ ನೋಡುತ್ತಾ
ಸುಖಾತೀಸುಖದ ಸಂಭ್ರಮ ಹೊತ್ತ
ಮುಖಗಳ ಒಳಮುಖದ ಅಡಿಯಲ್ಲಿ
ಮೂಡುವ ಜಂಬದ ಬೀಜ
ಬೃಹದಾಕಾರವಾಗುತ್ತ
ಸಹನೆಯ ಕಟ್ಟೆ
ಒಡೆದುಹೋದ ಆಣೆಕಟ್ಟಾಗುತ್ತದೆ.

ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...