Home / ಕವನ / ಕವಿತೆ / ಶೂನ್ಯದ ಮೋಹ

ಶೂನ್ಯದ ಮೋಹ

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ
ಆಕಾರದ ಸಂಖ್ಯೆಗಳು ಮುಖಬಲೆಗಳು,
ಸ್ಥಾನಬೆಲೆಗಳು ಗೋಜಲಿನ ಗೂಡನ್ನು
ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ
ಶೂನ್ಯಕ್ಕೆ ಶರಣಾಗುತ್ತದೆ ಮನ.

ಅಸ್ಮಿತೆಯ ಹಂಗೇ ಇಲ್ಲದೇ
ಮನೆಯಂಗಳದ ಮೂಲೆಯಲ್ಲಿ
ಅಡಿಕೆ ಸಿಪ್ಪೆ ಸುಲಿಸುಲಿದು
ಒಟ್ಟುಮಾಡುವ ಪಾರೋತಿ,
ನೆನಪಾಗುತ್ತ ನೆಲದ ಚಿಗುರೇ
ಅವಳಾದಂತೆ ಕನಸು
ಅಪ್ಪಟ ಮುಖವನ್ನೊಮ್ಮೆ ಮುದ್ದಿಸಬಯಸುತ್ತದೆ ಮನ.

ತ್ರಿಕರಣ ಶುದ್ಧತೆ ಪದ ಕೇಳದೆಯೂ
ಅದರ ತಾದ್ಯಾತ್ಮಸ್ವರೂಪಿಯೇ
ಆದ ಮಾದ
ತೆಂಗಿನಕಾಯಿ ಸಿಪ್ಪೆ ಸುಲಿಸುಲಿದು
ತೆಗೆಯುತ್ತಾ ಆಗಾಗ ಹೂಂಕರಿಸುತ್ತಾ
ಕತ್ತಿಯ ಸಿದ್ಧಿಯಲ್ಲಿ ತನ್ಮಯನಾಗುತ್ತಿದ್ದುದು
ನೆನಪಾಗುತ್ತ
ಅವನೆಂದರೆ ಬೆಳಕಿನ ಪುಂಜ ಎನ್ನಿಸುತ್ತದೆ.
ಆ ಕತ್ತಿಯ ಸಿದ್ಧಿಯ ಕರಗತಕ್ಕೆಳೆಸುತ್ತದೆ ಮನ

ಕೊಡಲೇನೂ ಇಲ್ಲ,
ಕಣ್ಣ ಮಧುರ ಮೈತ್ರಿಯ ಕಂಪು ಬಿಟ್ಟು
ಇಲ್ಲದ ಕಡೆಗಳಲ್ಲಿ ಅರಳುವ ಹೃದಯದ ಪರಿಮಳ
ಚಕ್ಷುವಿನ ಕಾಂತಿಗೆ ಬೆರಗಾಗುತ್ತದೆ ಮನ.

ತಳತಳಿಸುವ ಬೂಟು ಶೂಗಳ
ತೊಟ್ಟ ಪಾರಿನ್ ರಿಟರ್ನ್‍ಡ್ಗಳ
ವಿಚಿತ್ರ ಅಕ್ಸೆಂಟ್ಗಳ ಭಯಂಕರ ಹಾವಭಾವದ
ಮೈಕುಣಿತದ ಭಾಷೆಗಳ ನೋಡುತ್ತಾ
ಸುಖಾತೀಸುಖದ ಸಂಭ್ರಮ ಹೊತ್ತ
ಮುಖಗಳ ಒಳಮುಖದ ಅಡಿಯಲ್ಲಿ
ಮೂಡುವ ಜಂಬದ ಬೀಜ
ಬೃಹದಾಕಾರವಾಗುತ್ತ
ಸಹನೆಯ ಕಟ್ಟೆ
ಒಡೆದುಹೋದ ಆಣೆಕಟ್ಟಾಗುತ್ತದೆ.

ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...