ಶೂನ್ಯದ ಮೋಹ

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ
ಆಕಾರದ ಸಂಖ್ಯೆಗಳು ಮುಖಬಲೆಗಳು,
ಸ್ಥಾನಬೆಲೆಗಳು ಗೋಜಲಿನ ಗೂಡನ್ನು
ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ
ಶೂನ್ಯಕ್ಕೆ ಶರಣಾಗುತ್ತದೆ ಮನ.

ಅಸ್ಮಿತೆಯ ಹಂಗೇ ಇಲ್ಲದೇ
ಮನೆಯಂಗಳದ ಮೂಲೆಯಲ್ಲಿ
ಅಡಿಕೆ ಸಿಪ್ಪೆ ಸುಲಿಸುಲಿದು
ಒಟ್ಟುಮಾಡುವ ಪಾರೋತಿ,
ನೆನಪಾಗುತ್ತ ನೆಲದ ಚಿಗುರೇ
ಅವಳಾದಂತೆ ಕನಸು
ಅಪ್ಪಟ ಮುಖವನ್ನೊಮ್ಮೆ ಮುದ್ದಿಸಬಯಸುತ್ತದೆ ಮನ.

ತ್ರಿಕರಣ ಶುದ್ಧತೆ ಪದ ಕೇಳದೆಯೂ
ಅದರ ತಾದ್ಯಾತ್ಮಸ್ವರೂಪಿಯೇ
ಆದ ಮಾದ
ತೆಂಗಿನಕಾಯಿ ಸಿಪ್ಪೆ ಸುಲಿಸುಲಿದು
ತೆಗೆಯುತ್ತಾ ಆಗಾಗ ಹೂಂಕರಿಸುತ್ತಾ
ಕತ್ತಿಯ ಸಿದ್ಧಿಯಲ್ಲಿ ತನ್ಮಯನಾಗುತ್ತಿದ್ದುದು
ನೆನಪಾಗುತ್ತ
ಅವನೆಂದರೆ ಬೆಳಕಿನ ಪುಂಜ ಎನ್ನಿಸುತ್ತದೆ.
ಆ ಕತ್ತಿಯ ಸಿದ್ಧಿಯ ಕರಗತಕ್ಕೆಳೆಸುತ್ತದೆ ಮನ

ಕೊಡಲೇನೂ ಇಲ್ಲ,
ಕಣ್ಣ ಮಧುರ ಮೈತ್ರಿಯ ಕಂಪು ಬಿಟ್ಟು
ಇಲ್ಲದ ಕಡೆಗಳಲ್ಲಿ ಅರಳುವ ಹೃದಯದ ಪರಿಮಳ
ಚಕ್ಷುವಿನ ಕಾಂತಿಗೆ ಬೆರಗಾಗುತ್ತದೆ ಮನ.

ತಳತಳಿಸುವ ಬೂಟು ಶೂಗಳ
ತೊಟ್ಟ ಪಾರಿನ್ ರಿಟರ್ನ್‍ಡ್ಗಳ
ವಿಚಿತ್ರ ಅಕ್ಸೆಂಟ್ಗಳ ಭಯಂಕರ ಹಾವಭಾವದ
ಮೈಕುಣಿತದ ಭಾಷೆಗಳ ನೋಡುತ್ತಾ
ಸುಖಾತೀಸುಖದ ಸಂಭ್ರಮ ಹೊತ್ತ
ಮುಖಗಳ ಒಳಮುಖದ ಅಡಿಯಲ್ಲಿ
ಮೂಡುವ ಜಂಬದ ಬೀಜ
ಬೃಹದಾಕಾರವಾಗುತ್ತ
ಸಹನೆಯ ಕಟ್ಟೆ
ಒಡೆದುಹೋದ ಆಣೆಕಟ್ಟಾಗುತ್ತದೆ.

ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ಪ್ರೀತಿಸಿದ ಹುಡುಗಿಯರು
Next post ವಿಜಯ ವಿಲಾಸ – ಚತುರ್ಥ ತರಂಗ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys