Home / ಕವನ / ಕವಿತೆ / ಶೂನ್ಯದ ಮೋಹ

ಶೂನ್ಯದ ಮೋಹ

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ
ಆಕಾರದ ಸಂಖ್ಯೆಗಳು ಮುಖಬಲೆಗಳು,
ಸ್ಥಾನಬೆಲೆಗಳು ಗೋಜಲಿನ ಗೂಡನ್ನು
ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ
ಶೂನ್ಯಕ್ಕೆ ಶರಣಾಗುತ್ತದೆ ಮನ.

ಅಸ್ಮಿತೆಯ ಹಂಗೇ ಇಲ್ಲದೇ
ಮನೆಯಂಗಳದ ಮೂಲೆಯಲ್ಲಿ
ಅಡಿಕೆ ಸಿಪ್ಪೆ ಸುಲಿಸುಲಿದು
ಒಟ್ಟುಮಾಡುವ ಪಾರೋತಿ,
ನೆನಪಾಗುತ್ತ ನೆಲದ ಚಿಗುರೇ
ಅವಳಾದಂತೆ ಕನಸು
ಅಪ್ಪಟ ಮುಖವನ್ನೊಮ್ಮೆ ಮುದ್ದಿಸಬಯಸುತ್ತದೆ ಮನ.

ತ್ರಿಕರಣ ಶುದ್ಧತೆ ಪದ ಕೇಳದೆಯೂ
ಅದರ ತಾದ್ಯಾತ್ಮಸ್ವರೂಪಿಯೇ
ಆದ ಮಾದ
ತೆಂಗಿನಕಾಯಿ ಸಿಪ್ಪೆ ಸುಲಿಸುಲಿದು
ತೆಗೆಯುತ್ತಾ ಆಗಾಗ ಹೂಂಕರಿಸುತ್ತಾ
ಕತ್ತಿಯ ಸಿದ್ಧಿಯಲ್ಲಿ ತನ್ಮಯನಾಗುತ್ತಿದ್ದುದು
ನೆನಪಾಗುತ್ತ
ಅವನೆಂದರೆ ಬೆಳಕಿನ ಪುಂಜ ಎನ್ನಿಸುತ್ತದೆ.
ಆ ಕತ್ತಿಯ ಸಿದ್ಧಿಯ ಕರಗತಕ್ಕೆಳೆಸುತ್ತದೆ ಮನ

ಕೊಡಲೇನೂ ಇಲ್ಲ,
ಕಣ್ಣ ಮಧುರ ಮೈತ್ರಿಯ ಕಂಪು ಬಿಟ್ಟು
ಇಲ್ಲದ ಕಡೆಗಳಲ್ಲಿ ಅರಳುವ ಹೃದಯದ ಪರಿಮಳ
ಚಕ್ಷುವಿನ ಕಾಂತಿಗೆ ಬೆರಗಾಗುತ್ತದೆ ಮನ.

ತಳತಳಿಸುವ ಬೂಟು ಶೂಗಳ
ತೊಟ್ಟ ಪಾರಿನ್ ರಿಟರ್ನ್‍ಡ್ಗಳ
ವಿಚಿತ್ರ ಅಕ್ಸೆಂಟ್ಗಳ ಭಯಂಕರ ಹಾವಭಾವದ
ಮೈಕುಣಿತದ ಭಾಷೆಗಳ ನೋಡುತ್ತಾ
ಸುಖಾತೀಸುಖದ ಸಂಭ್ರಮ ಹೊತ್ತ
ಮುಖಗಳ ಒಳಮುಖದ ಅಡಿಯಲ್ಲಿ
ಮೂಡುವ ಜಂಬದ ಬೀಜ
ಬೃಹದಾಕಾರವಾಗುತ್ತ
ಸಹನೆಯ ಕಟ್ಟೆ
ಒಡೆದುಹೋದ ಆಣೆಕಟ್ಟಾಗುತ್ತದೆ.

ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...