ಒಮ್ಮೊಮ್ಮೆ ಹೀಗೂ ಆಗುವುದು

ಹಿಂದೊಮ್ಮೆ ಕೂಡಾ ಹೀಗೆ ಆಗಿತ್ತಲ್ಲ.
ಗಂಟುಗಂಟಾಗಿ ಸಿಕ್ಕು ಬಿದ್ದು ಅ-
ಕ್ಷರದ ತಾರೆಗಳೆಲ್ಲ ನೆಲಕ್ಕೆ ಚೆಲ್ಲಿದಂತೆ
ಜ್ಞಾನಪಾತ್ರೆಯ ಎದುರು ಹಸಿದ ಕಂಗಳು
ಮೂರ್‍ಚೆಗೊಂಡ ಮನಸ್ಸು
ನಗ್ನವಾಗಿ ನಿಂತುಬಿಟ್ಟವು
ಕಾಲ ಚಲಿಸಲಿಲ್ಲ.

ಆದರೆ ಮಜ್ಜಿಗೆಯೂಡಿದ
ಮರುಗಳಿಗೆ
ಅಮಲು ಇಳಿಯುವುದು
ಕಣ್ಣುಗಳ ಮಂಜು ಮಬ್ಬು ಕರಗುವುದು.
ಒಳದೃಷ್ಟಿ ಬೆಳಗುವುದು
ಹೆಚ್ಚು ಹೆಚ್ಚು ವ್ಯಾಖ್ಯಾನಿಸಿದಷ್ಟು
ಒಳಾರ್ಥದ ಕುದಿ
ಕಂದಿಹೋಗುವುದು ಮಿತಿಯ ಗತಿ
ಸೆಳೆದಷ್ಟು ಮರ್‍ಮ ಬೆಳೆಯುವುದು.

ಭವದ ಬಲೆಯಲ್ಲಿ ತೂಗುತ್ತ
ಹಾಲಾಹಲ ಚೂರು ಚೂರೇ
ಸಂಗಾತಕ್ಕೆ ಸರಿಗಟ್ಟಿತು.
ಜೀವ ನಿಲ್ಲುವುದಿಲ್ಲ
ನೆಲ ನೀರು ಕೂಡಿತೆಂದರೆ
ಬರಡು ಮಲೆಯಾಯಿತು.
ಕಾಷ್ಠದ ತೊಗಲಿಗೂ ಮಿಂಚುಹುಳುಗಳು
ಮುಕುರಿ ಜಗ್ಗನೇ ಹೊಳಪು ಹೊದ್ದ
ಮನ ಮಿರುಗಿತು.
ಶಮನಗೊಂಡಿತು ಉರಿ.
ಹೊಲದ ಅಂಚು ಹೊದ್ದ
ಬೇಲಿಗಂಬವನ್ನು ಬಿಡದೆ
ಅಂಟಿಕೊಂಡರೂ ಗೆದ್ದಲು
ಚಿಗುರುಕ್ಕಿ ನಸುನಕ್ಕಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖರ್ಬೂಜದ ಗಾಡಿ
Next post ವಿಜಯ ವಿಲಾಸ – ಪಂಚಮ ತರಂಗ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…