Home / ಕವನ / ಕವಿತೆ / ಮಾಗುವುದೆಂದರೆ ಇದೇ ಇರಬೇಕು

ಮಾಗುವುದೆಂದರೆ ಇದೇ ಇರಬೇಕು

ರಣ ಬಿಸಿಲು ಕೊಡೆ ಹಿಡಿದಿದೆ
ನೆಲದ ಒಡಲಿಗೆ ಸಣ್ಣಗೆ ಬಿರುಕು
ಕದಲದ ಭಂಗಿ, ನೆಟ್ಟ ನೋಟ
ಏಕಸ್ಥ ಧ್ಯಾನ
ಕಲ್ಲಾಗಿ ಕೂತು ಕಾಲವಾಗುವ ಬಯಕೆ
ಕಾಯುವಿಕೆ ಎಂದರೆ ಇದೇ ಇರಬೇಕು.

ಒಡಲು ಬಯಸಿದ ಹಸಿವು
ಕಾಲಬುಡದಲಿ ಸಿಗುವುದೆಂದು
ಮೇಯುವುದು ಮರೆತು ಹೋದರೆ
ಬಂಜರಾದರೆ ಭೂಮಿ
ಅನಾಹತದ ತಹತಹಕೆ
ಅದುಮಿಕೊಳ್ಳುವುದು ಅದು ಹೇಗೆ?
ನೋಯುವುದೆಂದರೆ ಇದೇ ಇರಬೇಕು.

ತಳದ ಜಲ ಇಂಗುವವರೆಗೂ
ಚೈತ್ರದ ಹಾಸಿಗೆಗೆ ಚಿಗುರು ಮೂಡಿಸಿ
ಸಾಕ್ಷಾತ್ಕಾರದ ಸಂಗವೆಂದು
ಭಾವಪರದೆಗೆ ನಿರ್‍ಭಾವುಕತೆಯ ಬಣ್ಣ
ಬಳಿದು, ಜಗದ ಮೋಹ ಮೀರಿದೆನೆಂಬ
ಅಲೌಕಿಕದ ಭ್ರಮೆ ಹೊತ್ತ ನಿಲುವು
ಕೊರಗುವುದೆಂದರೆ ಇದೇ ಇರಬೇಕು

ಮಿತಿಗೊಪ್ಪದ ಮನವನ್ನು
ಸಂಸ್ಕಾರವೆಂಬ ಅತಿರೇಕದ ಆಯುಧ
ಕ್ಷಣಕ್ಷಣವೂ ಬಿಡದೆ
ಅಕ್ಕಿಯಾಗಿಸಲು ಕುದಿಸುವ ಭತ್ತ
ತಿಕ್ಕಿ ತೀಡಿ ಮನದ ಕುಲುಮೆಯಲಿ
ಕಾಯಲಿಟ್ಟ ಕಾಕಂಬಿಯ ರಸ
ಬೇಯುವುದೆಂದರೆ ಇದೇ ಇರಬೇಕು

ಬೆಂಕಿಯನ್ನು ಅಂಗೈಯಲ್ಲಿಟ್ಟುಕೊಂಡೆ
ಕಡಲ ಭೊರ್‍ಗರೆತಕ್ಕೆ ಕಿವುಡಾಗುತ್ತಲೇ
ನಮೆದು ಸಣ್ಣದಾಗುತ್ತಲೇ
ಮತ್ತೆ ಹೊಳಪಿನ ಚುಕ್ಕಿಯನ್ನು
ಹಣೆಯಲ್ಲಿ ಧರಿಸಿ ಸ್ಪಷ್ಟವಾಗುವುದು
ಮಾಗುವುದೆಂದರೆ ಇದೇ ಇರಬೇಕು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...