Home / ಕವನ / ಕವಿತೆ / ಬ್ರಹ್ಮಾಂಡದ ದನಿಗಳು

ಬ್ರಹ್ಮಾಂಡದ ದನಿಗಳು

ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು
ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ
ಒಂದಿಷ್ಟು ಹಳತಾಗದ ಅದನ್ನೊಯ್ದು
ನೆತ್ತಿಯ ಗೋಡೆಗೆ
ಅಂಟಿಸಿಕೊಂಡರೆ ಚೆನ್ನ
ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ.

ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್ದು
ನೆಲಪಾಲಾದ ಕಸಗಳನ್ನೆಲ್ಲಾ ಎತ್ತಿ ಬಿಸಾಡಿದರೂ
ಕಂಬನೆಟ್ಟ ಕುಣಿ ಅರೆತೆರೆದುಕೊಂಡು ಹಾಗೇ ಬಿದ್ದಿದೆ
ಮಣ್ಣು ಕಲ್ಲುಗಳ ತುಂಬಿ ತಗ್ಗು ಮುಚ್ಚುಲೇ?
ಎನ್ನುತ್ತಿದ್ದಾನೆ- ಕೆಲಸದ ಮಂಕಾಳು.

ಸಿದ್ಧಾಂತ ತತ್ವ ಆದರ್ಶಗಳು ಜಪಕ್ಕಾಗಿ
ವಾದ ಪ್ರತಿವಾದ ಆಶಯಗಳು ನೆಪಕ್ಕಾಗಿ
ಹೀಗೆ ಪರಸ್ಪರ ವೈರುಧ್ಯಗಳ ಬಿಸಿನೀರು
ತುಂಬಿಕೊಂಡ ಹಂಡೆ
ಬೋರಲಾಗಿ ಬಿದ್ದರೆ, ಆ ನೆಲ ಹಸಿರುಕ್ಕಿಸಲಾರದು
ಎನ್ನುತ್ತಿದ್ದಾರೆ ಪ್ರೊಫೆಸರ್ರೊಬ್ಬರು.

ಭಾವ ಚಿಗುರುವುದು ಎದೆಯಲ್ಲಿ
ಮೆದುಳು ಮೀಯಬೇಕು ಸತ್ಯಂ ಶಿವಂ ಸುಂದರಂ
ಈ ಚುಕ್ಕಿ ಹೊಳಹನ್ನು
ಭಾಷ್ಯವಾಗಿಸುವುದೇ ಕಾಯಕವಾದ
ಗುರುಗಳ ಕೈಲಿಡಿದ ಬಳಪ ನೋಡುತ್ತ,
ಅದನ್ನೆ ಚೀಪುವ ಆಸೆಯುಕ್ಕಿ
ಬೆನ್ನಿಗೆ ಹೊಟ್ಟೆಯಂಟಿಸಿಕೊಂಡ ಹುಡುಗ
ಎಣ್ಣೆಗಾಣದ ಒಣಗೂದಲ ಕೆರೆದುಕೊಳ್ಳುತ್ತಾನೆ.
ಬಿಸಿಯೂಟದ ಘಮಘಮ ಬರುತ್ತಿಲ್ಲವೇ?
ಪಕ್ಕದ ಹುಡುಗನಿಗೆ ತಿವಿದು ಕೇಳುತ್ತಿದ್ದಾನೆ.

ಶತಶತಮಾನಗಳಿಂದ ಉರಿಬಿದ್ದ
ಬೆಂಕಿಯ ಮನೆಯ
ತಣ್ಣಗಾಗಿಸಲೆಂದು ಇದ್ದಿಲನ್ನು ಸುರಿಯುತ್ತಿದ್ದಾರೆ
ಆಚೀಚೆಯ ಮನೆಯವರು
ಆ ಮನೆಹೊಕ್ಕ ಇದ್ದಿಲು ಕ್ಷಣದಲ್ಲಿ
ನಿಗಿ ನಿಗಿಕೆಂಡವಾಗುತ್ತ
ವ್ಯಾಪಿಸಿಕೊಳ್ಳುತ್ತಿದೆ ಇನ್ನರ್ಧ ಜಾಗೆಯನ್ನು ಬಿಡದೆ
ನೆಲವೂ ಧಗಧಗನೇ ಉರಿಯಲಾರಂಭಿದರೆ ಮುಂದೇನು?
ಕಂಗಾಲಾಗಿ ಕೇಳುತ್ತಿದ್ದಾರೆ ನೆರೆಹೊರೆಯವರು.

ಸಮನ್ವಯತೆ ಫಲಕ ಧರಿಸಿದ ವಿಭಜಕ ಕಂಬಕ್ಕೆ
ಡಿಕ್ಕಿಹೊಡೆದ ಪಾರಿವಾಳವೊಂದು
ಸತ್ತೇ ಹೋಯಿತು
ಪರಿತಪಿಸುತ್ತಿದ್ದಾಳೆ ಹೆಣ್ಣೊಬ್ಬಳು

ಹತ್ತಾರು ರಾಗಗಳು ಗಿರಕಿ ಹೊಡೆಯುತ್ತವೆ
ಒಂದೇ ಮಂಡಲದಲ್ಲಿ ತಾರಕಕ್ಕೇರುತ್ತಿದೆ.
ಬ್ರಹ್ಮಾಂಡ ಜ್ಞಾನದ ಆಲಾಪಗಳಂತೆ
ಮುಖ ಎದೆ ಹೊಟ್ಟೆ ತುಂಬಾ ನೆರಿಗೆಗಳ
ಆಭರಣ ಧರಿಸಿದ ಸಾಧುವೊಬ್ಬ ಮುಗುಳ್ನಗುತ್ತಾನೆ.

ಬೆಂಕಿ ಮುಳ್ಳುಗಳನ್ನೆಲ್ಲಾ ಜಾಡಿಸಿ ಗುಡಿಸಿ
ಸೆಳೆದೊಯ್ಯುವಂತಹ ಮಳೆ ಬರುವ ಸುಣುಕು
ಆ ಹೊಸ ಸೋನೆ ಹನಿಯಲ್ಲಿ ಇವರೆಲ್ಲರೆಲ್ಲರೂ
ಅಪಾದಮಸ್ತಕ ನೆನೆಯಲಿ
ಮುದಗೊಳ್ಳಲಿ ದೇವರೇ..
ಕನಸುತ್ತೇನೆ ನಾನು…
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...