ಬ್ರಹ್ಮಾಂಡದ ದನಿಗಳು

ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು
ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ
ಒಂದಿಷ್ಟು ಹಳತಾಗದ ಅದನ್ನೊಯ್ದು
ನೆತ್ತಿಯ ಗೋಡೆಗೆ
ಅಂಟಿಸಿಕೊಂಡರೆ ಚೆನ್ನ
ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ.

ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್ದು
ನೆಲಪಾಲಾದ ಕಸಗಳನ್ನೆಲ್ಲಾ ಎತ್ತಿ ಬಿಸಾಡಿದರೂ
ಕಂಬನೆಟ್ಟ ಕುಣಿ ಅರೆತೆರೆದುಕೊಂಡು ಹಾಗೇ ಬಿದ್ದಿದೆ
ಮಣ್ಣು ಕಲ್ಲುಗಳ ತುಂಬಿ ತಗ್ಗು ಮುಚ್ಚುಲೇ?
ಎನ್ನುತ್ತಿದ್ದಾನೆ- ಕೆಲಸದ ಮಂಕಾಳು.

ಸಿದ್ಧಾಂತ ತತ್ವ ಆದರ್ಶಗಳು ಜಪಕ್ಕಾಗಿ
ವಾದ ಪ್ರತಿವಾದ ಆಶಯಗಳು ನೆಪಕ್ಕಾಗಿ
ಹೀಗೆ ಪರಸ್ಪರ ವೈರುಧ್ಯಗಳ ಬಿಸಿನೀರು
ತುಂಬಿಕೊಂಡ ಹಂಡೆ
ಬೋರಲಾಗಿ ಬಿದ್ದರೆ, ಆ ನೆಲ ಹಸಿರುಕ್ಕಿಸಲಾರದು
ಎನ್ನುತ್ತಿದ್ದಾರೆ ಪ್ರೊಫೆಸರ್ರೊಬ್ಬರು.

ಭಾವ ಚಿಗುರುವುದು ಎದೆಯಲ್ಲಿ
ಮೆದುಳು ಮೀಯಬೇಕು ಸತ್ಯಂ ಶಿವಂ ಸುಂದರಂ
ಈ ಚುಕ್ಕಿ ಹೊಳಹನ್ನು
ಭಾಷ್ಯವಾಗಿಸುವುದೇ ಕಾಯಕವಾದ
ಗುರುಗಳ ಕೈಲಿಡಿದ ಬಳಪ ನೋಡುತ್ತ,
ಅದನ್ನೆ ಚೀಪುವ ಆಸೆಯುಕ್ಕಿ
ಬೆನ್ನಿಗೆ ಹೊಟ್ಟೆಯಂಟಿಸಿಕೊಂಡ ಹುಡುಗ
ಎಣ್ಣೆಗಾಣದ ಒಣಗೂದಲ ಕೆರೆದುಕೊಳ್ಳುತ್ತಾನೆ.
ಬಿಸಿಯೂಟದ ಘಮಘಮ ಬರುತ್ತಿಲ್ಲವೇ?
ಪಕ್ಕದ ಹುಡುಗನಿಗೆ ತಿವಿದು ಕೇಳುತ್ತಿದ್ದಾನೆ.

ಶತಶತಮಾನಗಳಿಂದ ಉರಿಬಿದ್ದ
ಬೆಂಕಿಯ ಮನೆಯ
ತಣ್ಣಗಾಗಿಸಲೆಂದು ಇದ್ದಿಲನ್ನು ಸುರಿಯುತ್ತಿದ್ದಾರೆ
ಆಚೀಚೆಯ ಮನೆಯವರು
ಆ ಮನೆಹೊಕ್ಕ ಇದ್ದಿಲು ಕ್ಷಣದಲ್ಲಿ
ನಿಗಿ ನಿಗಿಕೆಂಡವಾಗುತ್ತ
ವ್ಯಾಪಿಸಿಕೊಳ್ಳುತ್ತಿದೆ ಇನ್ನರ್ಧ ಜಾಗೆಯನ್ನು ಬಿಡದೆ
ನೆಲವೂ ಧಗಧಗನೇ ಉರಿಯಲಾರಂಭಿದರೆ ಮುಂದೇನು?
ಕಂಗಾಲಾಗಿ ಕೇಳುತ್ತಿದ್ದಾರೆ ನೆರೆಹೊರೆಯವರು.

ಸಮನ್ವಯತೆ ಫಲಕ ಧರಿಸಿದ ವಿಭಜಕ ಕಂಬಕ್ಕೆ
ಡಿಕ್ಕಿಹೊಡೆದ ಪಾರಿವಾಳವೊಂದು
ಸತ್ತೇ ಹೋಯಿತು
ಪರಿತಪಿಸುತ್ತಿದ್ದಾಳೆ ಹೆಣ್ಣೊಬ್ಬಳು

ಹತ್ತಾರು ರಾಗಗಳು ಗಿರಕಿ ಹೊಡೆಯುತ್ತವೆ
ಒಂದೇ ಮಂಡಲದಲ್ಲಿ ತಾರಕಕ್ಕೇರುತ್ತಿದೆ.
ಬ್ರಹ್ಮಾಂಡ ಜ್ಞಾನದ ಆಲಾಪಗಳಂತೆ
ಮುಖ ಎದೆ ಹೊಟ್ಟೆ ತುಂಬಾ ನೆರಿಗೆಗಳ
ಆಭರಣ ಧರಿಸಿದ ಸಾಧುವೊಬ್ಬ ಮುಗುಳ್ನಗುತ್ತಾನೆ.

ಬೆಂಕಿ ಮುಳ್ಳುಗಳನ್ನೆಲ್ಲಾ ಜಾಡಿಸಿ ಗುಡಿಸಿ
ಸೆಳೆದೊಯ್ಯುವಂತಹ ಮಳೆ ಬರುವ ಸುಣುಕು
ಆ ಹೊಸ ಸೋನೆ ಹನಿಯಲ್ಲಿ ಇವರೆಲ್ಲರೆಲ್ಲರೂ
ಅಪಾದಮಸ್ತಕ ನೆನೆಯಲಿ
ಮುದಗೊಳ್ಳಲಿ ದೇವರೇ..
ಕನಸುತ್ತೇನೆ ನಾನು…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಿಂಗ್‌ಸ್ಲಿಯ ಗಾಂಧಿ
Next post ವಿಜಯ ವಿಲಾಸ – ಅಷ್ಟಮ ತರಂಗ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys