ಕೈಯಲ್ಲಿ ಕಡೆದಂತೆ ಜೀವನ

ಆಗಸದ ಮುಡಿಯಲ್ಲಿ ಒಡೆದ ಚಿಗುರು
ಸೌರಭವ ಮೈತುಂಬಾ ಹೊದೆದು
ನಳಿನವಿರು ತನುತಳೆದು
ಬಾಗುತಿದೆ ನೆಲದೆಡೆಗೆ ತುಳುಕಿ ಹಸಿರು

ನಂಬಿಕೆಯ ಹುತ್ತಕ್ಕೆ ಎರೆದ ಹಾಲು
ಹುತ್ತದ ನಡುವೆ ಮಲ್ಲಿಗೆ ಗಿಡ ಚಿಗುರಿಸುತ್ತ
ಈದೀಗ ಹೂ ಅರಳಿ ನಗುವ ಬೃಂದಾವನ

ಅಚ್ಚು ಹಾಕಿದ ಚಿತ್ರದಂತೆ ಹೊಲದ
ಅಂಚಿಗೆ ಕಣ್ಣರೆಪ್ಪೆ ಬಡಿಯುತ್ತ
ಮೃದುವಾದ ಗರಿಕೆ ಹುಲ್ಲನಷ್ಟೇ
ನಿರುಕಿಸುತ್ತಿದೆ ಎಳೆಗರು
ಎಳೆಯ ಗೊರಸಿಗೆ ಮೆಲ್ಲಗೆ ಪುಲಕಗೊಳ್ಳುತ್ತ
ಹೊಲದ ತುಂಬಾ ಹಬ್ಬಿದ ಕುರುಚಲ ನಡುವೆ
ಮೆತ್ತಗಿನ ನುಣುಪು ಹುಲ್ಲು
ತಾನೇತಾನೇ ಮೂಡುತ್ತಿದೆ.

ಮಜ್ಜಿಗೆಯ ಕಡೆದಂತೆಲ್ಲಾ ಉಕ್ಕುವ
ಬಿಳಿಯ ಬುರುಗಿನ ನೊರೆ
ಎದ್ದ ಬೊಬ್ಬೆಗಳು
ಪಟಪಟನೇ ಒಡೆದು ಮತ್ತೆ
ಉಕ್ಕಿ ಅರಳಿ ಬೆಸೆದು ಗಟ್ಟಿಗೊಳ್ಳುವ
ಮಥಿಸಿದಷ್ಟು ಕಡೆಗೋಲಿನ ವೇಗ ಹೆಚ್ಚುತ್ತ
ಶುಭ್ರವಾಗುವ ಬೆಣ್ಣೆ
ಕೈಯಲ್ಲಿ ಕಡೆದಂತೆ ಜೀವನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿ
Next post ಕನ್ನಡಕ್ಕಾಗಿ ಕಂಠ ಕಟ್ಟಿದರು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys