Home / ಕವನ / ಕವಿತೆ / ಢಂಬ ಬದುಕಿನ ತುಂಬಾ

ಢಂಬ ಬದುಕಿನ ತುಂಬಾ

ಚಿತ್ರಗಳೆಲ್ಲಾ ಒಂದೇ ಚೌಕಟ್ಟಿಗೆ
ಹೊಂದಿಕೊಳ್ಳುವಂತಿದ್ದರೆ
ಈಟಿ ಬಿಲ್ಲುಗಳು ಸೆಟೆದುಕೊಳ್ಳದಿದ್ದರೆ
ಮಲ್ಲಿಗೆಯ ಮಂಪರೇ
ನೆಲಮುಗಿಲ ಹಬ್ಬಿನಿಂತಿದ್ದರೆ,
ಹೀಗೆಲ್ಲ ಆಗುವಂತಿದ್ದರೆ,

ಕನಸುಗಳ ಜೀವ ಚಿಗುತುಕೊಳ್ಳುವುದೇ
ಹಾಗೆ
ಗಾಜು ಗುಜ್ಜಿನ ಬೆಳಕಿಗಿಂತ
ಹನಿ ಬಿಂದು ಮಣ್ಣಿನೆಲದ
ಕಣಕಣ ವ್ಯಾಮೋಹಿಸಿಬಿಡುತ್ತದೆ.
ದಿನಕಳೆದಂತೆಲ್ಲಾ ಬೆಳಕು ಹಿಗ್ಗುತ್ತಲೇ
ಬಯಲ ಬಿದಿರು ಬಿಮ್ಮನೆ
ಆಗಸಕ್ಕೆ ಏಣಿಯಾಗುತ್ತದೆ.
ಆಶೆ ಸ್ಥಾವರದ ದಿಕ್ಕಿನೆಡೆಗೆ ಸಣ್ಣ ನೋಟ
ಚಿಮುಕಿಸಿದರೂ ಸಾಕು
ತುಂಡು ತುಂಡು ನಕ್ಷತ್ರಗಳು
ಫಳ್ಳನೆ ಹೊಳೆದಂತಾಗುವುದು. ಆ
ನಕ್ಷತ್ರಗಳೇ ನಾವಾಗುವಂತಿದ್ದರೆ,

ಢಂಬ ಬದುಕಿನ ತುಂಬಾ
ಚಕಮಕಿ ಚೆಲ್ಲಿ ಬಿದ್ದರೂ ಜೀವ ತಹತಹ
ಅದೇಕೋ ನಿಲ್ಲುವುದೇ ಇಲ್ಲ
ನಾದದ ತಂಬೂರಿ ಮೀಟಿದಂತೆಲ್ಲಾ
ದಣಿವು ದುಮ್ಮಾನ ಬದಿಗೊತ್ತಿ
ಮಿಡುಕುವ ಮನಗಳು
ಉಕ್ಕಿದ ತೆನೆಗಳ ಬಳುಕಾಟಕ್ಕೆ
ಹೊಸೆದುಕೊಂಡರೆ
ಉದ್ದಕ್ಕೂ ಹಾಸಿ ಬೀಸುವ
ಮಲಯಪರ್ವತದ
ಕುಳಿರ್‍ಗಾಳಿ ಎದೆಯನ್ನೆ ಪುಷ್ಪವಾಗಿಸುತ್ತದೆ.
ಪುಷ್ಪವೇ ನಾವಾಗುವಂತಿದ್ದರೆ,

ನಾಳೆ ಬೀಳುವ ಎಲೆಗೂ ಗಾಳಿ
ಕುಲುಕಿಸಿ ಮೋಡಿ, ಮಗುವಿನ
ಕಿಲಕಿಲ ನಗು ಬೊಚ್ಚು ಬಾಯಿಯಲ್ಲೂ
ಮುದ್ದಾದ ಮಲ್ಲಿಗೆಯನ್ನೆ ಅರಳಿಸಿಬಿಡುತ್ತದೆ.
ಹಸಿರ ಕನಸೇ ಹಾಗೆ
ಕದಪು ಕೆಂದಾವರೆಯಾಗಿ ವಿನ್ಯಾಸಗೊಳ್ಳುತ್ತದೆ
ಮಣ್ಣೊಳಗೆ ಹೂಳಿದರೂ ಬೀಜ
ಚಿಗುರಾಗಿ ಹೊರಗಿಣುಕಿತು.
ಹೊಲದ ಅಂಚಿಗೆ ಅರೆಬರೆಯ ಬದುವು
ಇದ್ದರೂ ಅಂತರ್‍ಗತ ಜಿನುಗು
ಉಕ್ಕಿಸಿ ಬಿಡುತ್ತದೆ ಹಸಿರು
ನಾವೇ ಹಸಿರಾಗುವಂತಿದ್ದರೆ

ಪುಣ್ಯಕೋಟಿಯ ಕೆಚ್ಚಲು ಹಿಗ್ಗಿದಷ್ಟೂ
ಕರುವಷ್ಟೇ ಅಲ್ಲ,
ಕಾಳಿಂಗನ ಕರೆಮೊಗೆಯೂ ಹೀರಿ ಉಕ್ಕಿತು
ಪ್ರೀತಿ ಹೊಳೆವ ತಾರೆ ಹೂ ಹಸಿರು,
ಉಸಿರು ಬಸಿರು
ಪ್ರೀತಿಗೆ ಬೆತ್ತಲಾಗದಿದ್ದರೆ
ಬೆತ್ತಲೆ ಪದವೇ ಬಯಲಲ್ಲಿ ನಿಂತಿತು
ಬಯಲೇ ನಾವಾಗುವಂತಿದ್ದರೆ,
ನಾವೇ ಬಯಲಾದರೆ… ಬೆಳಕಾಗುವಂತಿದ್ದರೆ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...