Home / ಕವನ / ಕವಿತೆ / ಜೋಲಿಯಾಟದ ಜಗತ್ತು

ಜೋಲಿಯಾಟದ ಜಗತ್ತು

ಆಗೊಮ್ಮೆ ಈಗೊಮ್ಮೆ ಜಗದ
ನಿಯಮಗಳು ಬದಲಾಗುತ್ತವೆ.
ಬಿಸಿನೀರಿನಲ್ಲೂ ಜೀವಜಗತ್ತು
ತೆರೆದು ಕೊಳ್ಳುತ್ತದೆ.

ಸಾಗರದ ಬುಡವೂ ನಿಗಿನಿಗಿ ಉರಿಯುತ್ತದೆ.
ಎದೆಯ ಕಡಲಿಗೂ ಬೆಂಕಿ
ಇಳಿಯುತ್ತದೆ,

ಅನ್ವೇಷಣೆಯ ಆಲಂಬನ
ವ್ಯತ್ಯಾಸಗೊಂಡಿದ್ದು ವ್ಯಸನದಿಂದಲೇ
ದೃಷ್ಟಾರರು ನೆಪಮಾತ್ರ ಆಗಿ ಬಿಡುತ್ತಾರೆ

ಮಾತು ಸತ್ತ ಮನಸ್ಸುಗಳು
ಭಾವಶೂನ್ಯತೆಯಲ್ಲಿ ರೂಪಾಂತರಗೊಳ್ಳುತ್ತವೆ
ಕರಕಲು ಕಲ್ಲಿದ್ದಲಿ ರಾಶಿ ಕೆಂಡದಂಗಡಿ
ಮೇಲಿಂದ ಮೇಲೆ ಎದ್ದು
ಒಳಹೊರಗಿನ ರತ್ನಗಂಬಳಿಗಳು
ಕೊಚ್ಚೆ ಮೆತ್ತಿಕೊಂಡಿವೆ.

ಅಕ್ಷರದ ನೆಲೆಯಲ್ಲೂ ರೂಕ್ಷ
ರಕ್ತ ಪಿಪಾಸುಗಳು
ಮಾಂಸಕ್ಕೆ ಮುತ್ತುವ ನೊಣಗಳು
ಮೈತಾಳುತ್ತವೆ.

ಸಂತೆಯಲ್ಲಿ ಅಪ್ಪಚ್ಚಿಯಾಗುತ್ತವೆ
ಹಾರುವ ಅಭಿಲಾಷೆಗೆ ರೆಕ್ಕೆ ಕಟ್ಟಿಕೊಂಡ
ಚಿಟ್ಟೆಗಳು
ಪ್ರೇಮ ಮತ್ತು ಮಸಣಗಳು
ಒಂದೇ ತೊಟ್ಟಿಲಲ್ಲಿ ಜೋಕಾಲಿಯಾಡುತ್ತವೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...