ಜೋಲಿಯಾಟದ ಜಗತ್ತು

ಆಗೊಮ್ಮೆ ಈಗೊಮ್ಮೆ ಜಗದ
ನಿಯಮಗಳು ಬದಲಾಗುತ್ತವೆ.
ಬಿಸಿನೀರಿನಲ್ಲೂ ಜೀವಜಗತ್ತು
ತೆರೆದು ಕೊಳ್ಳುತ್ತದೆ.

ಸಾಗರದ ಬುಡವೂ ನಿಗಿನಿಗಿ ಉರಿಯುತ್ತದೆ.
ಎದೆಯ ಕಡಲಿಗೂ ಬೆಂಕಿ
ಇಳಿಯುತ್ತದೆ,

ಅನ್ವೇಷಣೆಯ ಆಲಂಬನ
ವ್ಯತ್ಯಾಸಗೊಂಡಿದ್ದು ವ್ಯಸನದಿಂದಲೇ
ದೃಷ್ಟಾರರು ನೆಪಮಾತ್ರ ಆಗಿ ಬಿಡುತ್ತಾರೆ

ಮಾತು ಸತ್ತ ಮನಸ್ಸುಗಳು
ಭಾವಶೂನ್ಯತೆಯಲ್ಲಿ ರೂಪಾಂತರಗೊಳ್ಳುತ್ತವೆ
ಕರಕಲು ಕಲ್ಲಿದ್ದಲಿ ರಾಶಿ ಕೆಂಡದಂಗಡಿ
ಮೇಲಿಂದ ಮೇಲೆ ಎದ್ದು
ಒಳಹೊರಗಿನ ರತ್ನಗಂಬಳಿಗಳು
ಕೊಚ್ಚೆ ಮೆತ್ತಿಕೊಂಡಿವೆ.

ಅಕ್ಷರದ ನೆಲೆಯಲ್ಲೂ ರೂಕ್ಷ
ರಕ್ತ ಪಿಪಾಸುಗಳು
ಮಾಂಸಕ್ಕೆ ಮುತ್ತುವ ನೊಣಗಳು
ಮೈತಾಳುತ್ತವೆ.

ಸಂತೆಯಲ್ಲಿ ಅಪ್ಪಚ್ಚಿಯಾಗುತ್ತವೆ
ಹಾರುವ ಅಭಿಲಾಷೆಗೆ ರೆಕ್ಕೆ ಕಟ್ಟಿಕೊಂಡ
ಚಿಟ್ಟೆಗಳು
ಪ್ರೇಮ ಮತ್ತು ಮಸಣಗಳು
ಒಂದೇ ತೊಟ್ಟಿಲಲ್ಲಿ ಜೋಕಾಲಿಯಾಡುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇದ್ದವರು, ಇಲ್ಲದವರು
Next post ಜಾತಿಗಳೇ ಜೈಲಾಗದಿರಿ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…