ಹೇಂಟೆಯ ಕವಿತೆ

ಕವನಗಳ ಕಟ್ಟಿ
ನವ್ಯ ನವೋದಯ ಪ್ರಗತಿಶೀಲದ
ಅಂಗಿ ತೊಟ್ಟವರು
ಸ್ತ್ರೀ ವಾದಿಯೆಂದೋ, ಬಂಡಾಯ ಎಂದೋ
ದಲಿತನೆಂದೋ ಹಣೆಪಟ್ಟಿ ಹಚ್ಚಿಕೊಂಡು
ಮೇಲೊಂದು ಜಾಕೀಟು ತೊಟ್ಟು
ಮೈಕು ಹಿಡಿದು ಮೆರೆಯುತ್ತ
ಅರೇ! ನಾನೇನು ಹೇಳುತ್ತಿದ್ದೇನೆ
ಕವಿತೆ ಕಟ್ಟುವ ಬಗ್ಗೆ ಅಲ್ಲವೇ?
ಬನ್ನಿ.. ಹಳ್ಳಿಗಾಡಿನ ಕೋಳಿಗೂಡಿನ ಮನೆಗೆ
ಅಲ್ಲಿ ಕವಿತೆಯೇ ಕಾಣುತ್ತಾಳೆ ನಿಮಗೆ

ಕೋಳಿಗೂಡಿನ ಕಥೆಯೇನೂ
ಸಾಮಾನ್ಯವಲ್ಲ
ಅಲ್ಲಿ ಹುಂಜ ಎಂಬ ಗಂಡ ಬರಿಯ ಬೀಜದಾತ
ದಿನಬೆಳಗು ಮೊಟ್ಟೆ ಮೇಲೆ ಕೂತು
ಕಾವು ಕೊಟ್ಟು,
ಕೃಶವಾಗಿ ಕುಡಿ ಬರಿಸಲು
ಕಾಯುತ್ತದೆ ಕವಿತೆ
ಹಠತೊಟ್ಟ ಯೋಗಿಯಂತೆ.

ತಲೆಗೆ ಜುಟ್ಟು ಬಂದ ಮಾತ್ರಕ್ಕೆ
ತಲೆಯೊಳಗೆ ಇದ್ದದ್ದೆಲ್ಲಾ ವಾಙ್ಮಯ
ಎಂದುಕೊಂಡ ಹಿರಿಯ ಹುಂಜಗಳು
ಹೊಗಳಿದ್ದು ತೆಗಳಿದ್ದು
ಅದೇ ಆಕಾರದ ಜುಟ್ಟನ್ನು ಮಾತ್ರ
ಹೇಂಟೆಯ ಸಾಗರದ ಹರವುಳ್ಳ ಪಕ್ಕೆಗಳ
ಅಳೆಯುವುದು ಬಿಡಿ, ಅರಿತುಕೊಳ್ಳಲು ಆಗದು
ಜಡಜುಟ್ಟಿಗೆ

ಮಣ್ಣನೆಲವನ್ನು ಮುರುಟಿದ ಉಗುರುಗಳಿಂದ
ಬಗೆದು ಕೊನೆಯ ಅಲಗಿನ
ತುದಿ ಮುರಿಯುವ ತನಕವೂ
ಬಡಿದಾಡುವ ಕವನ ಸಿಕ್ಕ ಸಿಕ್ಕ ಕ್ರೀಮಿ ಕೀಟಗಳ
ಕಂಡಲ್ಲೆ ಕುಟುಕಿ ಬಾಯಿಗಿಡುತ್ತದೆ ಮರಿಗೆ
ತನ್ನೊಡಲ ಹಸಿವ ಇಂಗಿಸಿಕೊಳ್ಳುತ್ತದೆ
ಉಗುಳನುಂಗುತ್ತ.

ಇಷ್ಟಿಷ್ಟೇ ಉಂಡೆಯಾಕಾರದ ಮುದ್ದೆ
ಮರಿಗಳನ್ನು ಕಾಯುವುದು ಹದ್ದಿನ
ವಕ್ರದೃಷ್ಟಿಯಿಂದ ಕಾಪಾಡಿಕೊಳ್ಳುವುದೇನೂ
ಸುಲಭವಲ್ಲ. ಕೊಕ್ಕೋಕ್ಕೋ‌ಓ‌ಓ‌ಓ
ಕರೆದು ಕರೆದು ಪಕ್ಕೆಯಲ್ಲಿ
ಬಚ್ಚಿಟ್ಟುಕೊಂಡಷ್ಟು ಎಳವೆಯ ಮೋಜು
ಹುಡುಗಾಟ ಪುಕ್ಕ ಏರಿಸಿ ಪುಟಪುಟ ಹೊರಬಿದ್ದು
ಜಗವ ನೋಡುವ ಮರಿಗವನಗಳು
ಕಂಟಕಕ್ಕೆ ಎದುರಾದವೋ
ಕಾಲು ಕೆರೆದು ಸೆಟೆದು
ಹದ್ದಿನ ಮೇಲೆರಗುತ್ತದೆ ಕವಿತೆ
ಥೇಟ್, ಮರಿ ಇಟ್ಟ ಹೆಣ್ಣು ನಾಯಿಯಂತೆ.

ಹಿಂದೊಮ್ಮೆ ಬೇಟದ ಅಂಗಣವಾಗಿದ್ದ
ಹಳ್ಳಿಗಾಡಿನ ಕುತ್ತರಿಯ ಕಣ
ಹೇಂಟೆಯ ಬೇಟೆಯ ಕಣವೂ.
ಮರಿಕೋಳಿಗಳ ಟೋಳಿ ಕಟ್ಟಿಕೊಂಡು ಬರುವ
ಹೇಂಟೆ ಜಂಗಮ ಕವಿತೆ
ಈಗ ಅರ್‍ಥೈಸಿಕೊಳ್ಳಿ ನಿಮಗೆ ಬೇಕಾದಂತೆ
ನವ್ಯವೋ ನವೋದಯವೋ
ಪ್ರಗತಿಶೀಲವೋ,
ಸ್ತ್ರೀವಾದ, ದಲಿತ ಬಂಡಾಯವೋ
ಈ ಹೇಂಟೆ ಕವಿತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರೀನಾದಲ್ಲಿ ಕವಿ
Next post ಹೀಗೊಂದು ಮಗುವಿನ ಘಟನೆ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

cheap jordans|wholesale air max|wholesale jordans|wholesale jewelry|wholesale jerseys