Home / ಕವನ / ಕವಿತೆ / ಒಲವು ಬಂಧನವಲ್ಲ

ಒಲವು ಬಂಧನವಲ್ಲ

ಹಿಂದೆಲ್ಲ ಬಣ್ಣಬಣ್ಣದ ನಾಜೂಕು ಬಳೆಗಳ
ಕಂಡಾಗಲೆಲ್ಲಾ ಮನ ನವಿಲಾಗುತ್ತಿತ್ತು.
ಕಿಣಿಕಿಣಿ ನಾದ ಕಿವಿ ತುಂಬುತ್ತಿತ್ತು. ಆದರೆ
ಬಂಗಾರದ ಮಿನುಗು ಬಳೆಗಳು
ಹಸಿರು ಗಾಜಿನ ಬಳೆಗಳು
ದಿನಕಳೆದು ಗಡುಸಾದಂತೆ ಕೈಗಳು
ಗಾಯಗೊಳಿಸುತ್ತವೆ ತೊಡುವಾಗಲೆಲ್ಲಾ..
ಸಂಕೋಲೆಯ ಕಂಕಣ
ಡಂಭ ಜೀವನದ ಸುರುಳಿ
ಬಳೆ ತೊಡುವುದೆಂದರೆ ನನ್ನ
ಕೈಗಳಿಗೆ ಬೇಡಿ.

ಅಂಟಿಕೊಂಡ ಮೂಗುತಿ
ಮೂಗುತಿಯೇ ಇಲ್ಲದ
ನಿರಾಭರಣ ಮುಖಗಳ
ಕಂಡಾಗಲೆಲ್ಲಾ ನನ್ನ ಅಣಕಿಸುತ್ತದೆ.
ಆಗಾಗ ಎಲ್ಲೆಲ್ಲೋ ತೊಡರಿಕೊಂಡು
ಮೂಗು ಘಾಸಿಗೊಳ್ಳುವಾಗಲೆಲ್ಲಾ,
ಅಂದುಕೊಳ್ಳುತ್ತೇನೆ.. ಇದರ ಹಂಗೇ ಬೇಡ.
ತೆಗೆದು ಪಕ್ಕಕ್ಕಿಡಲೇ… ಎಂದು.

ಅರಿಸಿನದ ನಂಜು ತೆಗೆಯುವ ಕೊಂಬು
ಕೆಲವೊಮ್ಮೆ ಕುತ್ತಿಗೆಗೆ ಕೆರೆತ ತಂದಿಡುತ್ತದೆ.
ತಾಳಿಯ ನೀರು ಮೈಮೇಲೆ ಬಿದ್ದರೂ
ಕಡಿತ ಕಾಡುತ್ತದೆ.
ಮುಲಾಮುಗಳ ಸಾಲು ಹೆಚ್ಚು
ಹೆಚ್ಚುತ್ತಾ ಹೋದರೂ
ತುರಿಕೆ ನಿಲ್ಲುವುದಿಲ್ಲ.

ಮುಂಚಿನಂತೆ ಈಗ ನನ್ನ ಕಾಲಿಗೆ
ಗೆಜ್ಜೆ ಶೋಭಿಸುವುದಿಲ್ಲ.
ಗೆಜ್ಜೆಯ ಸುತ್ತ ಕಟ್ಟಿಕೊಂಡ ಆ ಸದ್ದು
ತಾರಕ್ಕೇರಿದಂತೆ ಸಂತೆಯೇ ಭುಗಿಲೇಳುತ್ತದೆ.

ತನು ಬಂಧನದ ಕಡಿವಾಣಗಳು
ಕಟ್ಟಿಹಾಕುವುದ ಅರಿತಿಲ್ಲ-
ಮನಗುದುರೆಗೆ ನಾಗಾಲೋಟ
ಕಲಿಸಬೇಕಿಲ್ಲ.
ಎಂದರೆ ಅವನೆಂದ ಒಳಹೊರಗು ಅರಿತರೆ
ತಾಳಿ, ನತ್ತು, ಬಳೆ ನಿನಗೆ ಬೇಕೆಂದಿಲ್ಲ
ಹೊರಗು ಮಾಡಬೇಕಿಲ್ಲ,
ಒಳಜಡಿದು ಬೀಗ ಹಾಕಬೇಕಿಲ್ಲ.
ಮತ್ತೆಲ್ಲವೂ ನಿನ್ನಿಷ್ಟ,
ನಿನ್ನೊಳಗೆ ನಾ
ನಿರುವುದೇ ನನ್ನ ಅದೃಷ್ಟ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...