ಒಲವು ಬಂಧನವಲ್ಲ

ಹಿಂದೆಲ್ಲ ಬಣ್ಣಬಣ್ಣದ ನಾಜೂಕು ಬಳೆಗಳ
ಕಂಡಾಗಲೆಲ್ಲಾ ಮನ ನವಿಲಾಗುತ್ತಿತ್ತು.
ಕಿಣಿಕಿಣಿ ನಾದ ಕಿವಿ ತುಂಬುತ್ತಿತ್ತು. ಆದರೆ
ಬಂಗಾರದ ಮಿನುಗು ಬಳೆಗಳು
ಹಸಿರು ಗಾಜಿನ ಬಳೆಗಳು
ದಿನಕಳೆದು ಗಡುಸಾದಂತೆ ಕೈಗಳು
ಗಾಯಗೊಳಿಸುತ್ತವೆ ತೊಡುವಾಗಲೆಲ್ಲಾ..
ಸಂಕೋಲೆಯ ಕಂಕಣ
ಡಂಭ ಜೀವನದ ಸುರುಳಿ
ಬಳೆ ತೊಡುವುದೆಂದರೆ ನನ್ನ
ಕೈಗಳಿಗೆ ಬೇಡಿ.

ಅಂಟಿಕೊಂಡ ಮೂಗುತಿ
ಮೂಗುತಿಯೇ ಇಲ್ಲದ
ನಿರಾಭರಣ ಮುಖಗಳ
ಕಂಡಾಗಲೆಲ್ಲಾ ನನ್ನ ಅಣಕಿಸುತ್ತದೆ.
ಆಗಾಗ ಎಲ್ಲೆಲ್ಲೋ ತೊಡರಿಕೊಂಡು
ಮೂಗು ಘಾಸಿಗೊಳ್ಳುವಾಗಲೆಲ್ಲಾ,
ಅಂದುಕೊಳ್ಳುತ್ತೇನೆ.. ಇದರ ಹಂಗೇ ಬೇಡ.
ತೆಗೆದು ಪಕ್ಕಕ್ಕಿಡಲೇ… ಎಂದು.

ಅರಿಸಿನದ ನಂಜು ತೆಗೆಯುವ ಕೊಂಬು
ಕೆಲವೊಮ್ಮೆ ಕುತ್ತಿಗೆಗೆ ಕೆರೆತ ತಂದಿಡುತ್ತದೆ.
ತಾಳಿಯ ನೀರು ಮೈಮೇಲೆ ಬಿದ್ದರೂ
ಕಡಿತ ಕಾಡುತ್ತದೆ.
ಮುಲಾಮುಗಳ ಸಾಲು ಹೆಚ್ಚು
ಹೆಚ್ಚುತ್ತಾ ಹೋದರೂ
ತುರಿಕೆ ನಿಲ್ಲುವುದಿಲ್ಲ.

ಮುಂಚಿನಂತೆ ಈಗ ನನ್ನ ಕಾಲಿಗೆ
ಗೆಜ್ಜೆ ಶೋಭಿಸುವುದಿಲ್ಲ.
ಗೆಜ್ಜೆಯ ಸುತ್ತ ಕಟ್ಟಿಕೊಂಡ ಆ ಸದ್ದು
ತಾರಕ್ಕೇರಿದಂತೆ ಸಂತೆಯೇ ಭುಗಿಲೇಳುತ್ತದೆ.

ತನು ಬಂಧನದ ಕಡಿವಾಣಗಳು
ಕಟ್ಟಿಹಾಕುವುದ ಅರಿತಿಲ್ಲ-
ಮನಗುದುರೆಗೆ ನಾಗಾಲೋಟ
ಕಲಿಸಬೇಕಿಲ್ಲ.
ಎಂದರೆ ಅವನೆಂದ ಒಳಹೊರಗು ಅರಿತರೆ
ತಾಳಿ, ನತ್ತು, ಬಳೆ ನಿನಗೆ ಬೇಕೆಂದಿಲ್ಲ
ಹೊರಗು ಮಾಡಬೇಕಿಲ್ಲ,
ಒಳಜಡಿದು ಬೀಗ ಹಾಕಬೇಕಿಲ್ಲ.
ಮತ್ತೆಲ್ಲವೂ ನಿನ್ನಿಷ್ಟ,
ನಿನ್ನೊಳಗೆ ನಾ
ನಿರುವುದೇ ನನ್ನ ಅದೃಷ್ಟ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾವುದಿಲ್ಲ ಯಾವುದುಂಟು
Next post ಮಾವೊ : ನೂರು ವರ್ಷದ ನೆನಪು

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…