ಹುಲಿ

ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಮೇಲಾಗಿ ಇದು “ವನ ರಾಜ”. ಇದು ಬೆಕ್ಕಿನ ವರ್‍ಗಕ್ಕೆ ಸೇರಿದೆ. ಇದರ ಮೈ ಬಣ್ಣ ಕಂದು. ಅದರ ಮೇಲೆ ಕಪ್ಪು ಪಟ್ಟೆಗಳು. ಇದು ಬಲಯುತವೂ, ಚುರುಕೂ ಆದ ಸ್ನಾಯುಖಂಡಗಳನ್ನು ಹೊಂದಿದೆ. ಇದರ ಹಿಂಗಾಲು ಮುಂಗಾಲುಗಳು ದೇಹಕ್ಕೆ ತಕ್ಕಂತೆ ಬಲಿಷ್ಠವಾಗಿವೆ. ಇದು ತನ್ನ ದೇಹದ ಭಾರವನ್ನು ಹೆಚ್ಚಾಗಿ ಮುಂಗಾಲುಗಳ ಮೇಲೆಯೇ ಹಾಕಿ ನಡೆಯುತ್ತದೆ. ಸದ್ದಿಲ್ಲದೆ ನಡೆಯಬೇಕಾದಾಗ ಇದು ತನ್ನ ವಕ್ರವಾದ ಉಗುರುಗಳನ್ನು ಒಳಗೆ ಎಳೆದುಕೊಳ್ಳುತ್ತದೆ.

ಹೆಣ್ಣು ಹುಲಿ ತನ್ನ ಮರಿಗಳನ್ನು ಬಹಳ ಪ್ರೀತಿಯಿಂದ ಸಾಕುತ್ತದೆ. ಹುಲಿ ಧೈರ್‍ಯ ಮತ್ತು ಸ್ಥೈರ್‍ಯಕ್ಕೆ ಹೆಸರಾದ ಪ್ರಾಣಿ. ಹುಲಿಗಳು ಸರಾಗವಾಗಿ ನೀರಿನಲ್ಲಿ ಈಜಬಲ್ಲವು ಮತ್ತು ಮರವನ್ನು ಹತ್ತಬಲ್ಲವು. ಸಾಮಾನ್ಯವಾಗಿ ಹುಲಿಗಳು ೧೬ ರಿಂದ ೨೦ ವರ್‍ಷಗಳವರೆಗೆ ಜೀವಿಸುತ್ತವೆ.

ತುಲನೆ ಮಾಡಿ ನೋಡಿದರೆ ಸಿಂಹಕ್ಕಿಂತ ಹುಲಿಯೇ ಬಲಿಷ್ಠ. ಹುಲಿಗೂ ಸಿಂಹಕ್ಕೂ ಕಾದಾಟವಾದರೆ ಹುಲಿಯೇ ಗೆಲ್ಲುತ್ತದೆ.

ಹುಲಿಗಳು ಹೆಚ್ಚಾಗಿ ಏಷಿಯಾ ಖಂಡದ ಮಂಚೋರಿಯಾ ದೇಶದಿಂದ ಹಿಡಿದು ಚೀನಾ, ಭಾರತ, ಜಾವಾ ಮತ್ತು ಬೋರ್‍ನಿಯಾ ದೇಶಗಳ ಕಾಡುಗಳಲ್ಲಿ ವಾಸಿಸುತ್ತವೆ. ಭಾರತದಲ್ಲಿ ಹುಲಿಗಳು ಹೆಚ್ಚಾಗಿ ಬಂಗಾಲ, ಬಿಹಾರ, ಪಶ್ಚಿಮ ಘಟ್ಟದ ಮಲೆನಾಡಿನ ಕಾಡು, ನೇಪಾಳ ಮತ್ತು ಹಿಮಾಲಯದ ತೆರಾಂ ಮುಂತಾದ ಸ್ಥಳಗಳಲ್ಲಿ ವಾಸಿಸುತ್ತವೆ. ಮಂಚೋರಿಯಾ ದೇಶದ ಹುಲಿಗಳು ನಮ್ಮ ದೇಶದ ಹುಳಿಗಳಿಗಿಂತಲೂ ದೊಡ್ಡದಾಗಿವೆ. ಅವುಗಳ ಮೈ ಬಣ್ಣ ಕಂದು ಮತ್ತು ಕಿತ್ತಳೆ.

ವಿನಾಶದ ಅಂಚಿನಲ್ಲಿ

ಭಾರತದಲ್ಲಿರುವಷ್ಟು ಹುಲಿಗಳು ಬೇರೆಲ್ಲೂ ಇಲ್ಲ. ನಮ್ಮಲ್ಲಿರುವ ಹುಲಿಗಳ ಸಂಖ್ಯೆ ಸುಮಾರು ೪,೦೦೦. ಚೀನಾದಲ್ಲಿ ಹುಲಿಗಳ ಮೂಳೆಗಳನ್ನು ಉಪಯೋಗಿಸಿ ಅದ್ಭುತ ಗುಣಗಳಿರುವ “ಟೈಗರ್‍ ವೈನ್” ತಯಾರಿಸುತ್ತಿದ್ದಾರೆ. ಆದ್ದರಿಂದ ಚೀನಾದ ೧೧೦ ಕಾರ್‍ಖಾನೆಗಳಿಗೆ ಕಳ್ಳತನದಿಂದ ಭಾರತದ ಹುಲಿಗಳ ಮೂಳೆ ಸರಬರಾಜು. ೧ ಕಿಲೋ ಮೂಳೆಯ ಬೆಲೆ ೨,೪೦೦ ರೂಪಾಯಿ. ಒಂದು ಹುಲಿಯಲ್ಲಿರುವ ಮೂಳೆ ತೂಕ ೧೮ ಕಿಲೋ. ಹಾಗಾಗಿ ಒಂದು ಹುಲಿಯನ್ನು ಕೊಂದರೆ ೪೨,೦೦೦ ರೂಪಾಯಿ ಸಂಪಾದನೆ! ಅದರ ಚರ್‍ಮಕ್ಕೆ ೨ ಲಕ್ಷಕ್ಕೂ ಮೀರಿ ಬೆಲೆಯಿದೆ. ಹೀಗಾಗಿ ಒಂದು ಸತ್ತ ಹುಲಿಯಿಂದ ಒಟ್ಟು ಸುಮಾರು ೩ ಲಕ್ಷ ರೂಪಾಯಿ ಆದಾಯವಿದೆ.

ಹೀಗೆಯೇ ಈ ಬೇಟೆಯು ಮುಂದುವರಿದರೆ ನಾಳಿನ ಜನಾಂಗ ಹುಲಿಗಳನ್ನು ಕೇವಲ ಕಥೆಗಳಲ್ಲಿ ಅಥವಾ ಚಿತ್ರಗಳಲ್ಲಿ ಕಾಣಬೇಕಾಗುತ್ತದೆ. ರಾಷ್ಟ್ರೀಯ ಪ್ರಾಣಿ ಹುಲಿಯನ್ನು ರಕ್ಷಿಸುವುದು ಇಂದು ಅಗತ್ಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...