Home / ಲೇಖನ / ವಿಜ್ಞಾನ / ಜೇನು: ಆಹಾರ-ಔಷಧಿ

ಜೇನು: ಆಹಾರ-ಔಷಧಿ

“ಜೇನು” ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿಂದ ಹಳದಿ ಮತ್ತು ಕಡು ಹಳದಿ ಬಣ್ಣಗಳವರೆಗೆ ಜೇನಿನಲ್ಲಿ ವರ್‍ಣವೈವಿಧ್ಯವುಂಟು. ಜೇನು ಆಹಾರವೂ ಹೌದು, ಔಷಧವೂ ಹೌದು.

ಜೇನು ವೈದ್ಯಕೀಯ ಶಾಸ್ತ್ರದಲ್ಲಿ ಮತ್ತು ಆಯುರ್‍ವೇದ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಜೇನು ಹಾಲಿಗಿಂತಲೂ ಆರು ಪಟ್ಟು ಪೌಷ್ಟಿಕತೆ ಹೊಂದಿದೆ. ಬಿಳಿ ಬಣ್ಣದ ಜೇನು ತುಪ್ಪಕ್ಕಿಂದ ಕಂದು ಬಣ್ಣದ ಜೇನಿನಲ್ಲಿ ಪೌಷ್ಟಿಕ ಪ್ರಮಾಣ ಹೆಚ್ಚಾಗಿರುತ್ತದೆ. ಶಕ್ತಿಯನ್ನು ಒದಗಿಸುವಲ್ಲಿ ಜೇನಿಗೇ ಮೊದಲನೆ ಸ್ಥಾನ. ೧೦ ಟೇಬಲ್ ಚಮಚ (೨೦೦ ಗ್ರಾಂ)ದಷ್ಟು ಜೇನು, ೩೩೦ ಗ್ರಾಂ ಮಾಂಸ ಅಥವಾ ೧೦ ಕೋಳಿಮೊಟ್ಟೆ ಅಥವಾ ೮ ಕಿತ್ತಳೆಹಣ್ಣು ಅಥವಾ ೧ ಲೀಟರ್‍ ಹಾಲು ಒದಗಿಸುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶವನ್ನು ಒದಗಿಸುತ್ತದೆಯೆಂದಾಗ ಅದರ ಶಕ್ತಿಯ ಅರಿವಾಗದಿರದು. ಸುಮಾರು ೨೧ ಗ್ರಾಂ ಜೇನುತುಪ್ಪ ಸುಮಾರು ೬೭ ಕ್ಯಾಲೋರಿಗಳಷ್ಟು ಶಕ್ತಿಯನ್ನು ಒದಗಿಸಬಲ್ಲದು.

ಮುಖ್ಯವಾಗಿ ಜೇನಿನಲ್ಲಿ ಲೆವ್ಯೂಲೋಸ್ ಮತ್ತು ಡೆಕ್ಸ್‌ಟ್ರೋಸ್ ಎಂಬ ಸಕ್ಕರೆಗಳು ಇರುತ್ತವಾದರೂ, ಅದರಲ್ಲಿ ದೇಹಾರೋಗ್ಯಕ್ಕೆ ಅಗತ್ಯವಿರುವ ಹೆಚ್ಚು ಕಡಿಮೆ ಎಲ್ಲಾ ಖನಿಜ-ಲವಣಾಂಶಗಳು ಮತ್ತು ವಿಟಾಮಿನ್‌ಗಳು ಸಾಕಷ್ಟಿವೆ. ಜೇನುತುಪ್ಪದಲ್ಲಿರುವ ಕಬ್ಬಿಣ ಮತ್ತು ತಾಮ್ರದ ಅಂಶಗಳು ನೇರವಾಗಿ ಸಂಪೂರ್‍ಣವಾಗಿ ದೇಹದಲ್ಲಿ ಅರಗಿಕೊಂಡು ಬರುತ್ತವೆ. ಇದರ ಜೊತೆಗೆ ಇತರ ಪದಾರ್‍ಥಗಳು ಕೂಡ ಇದರ ಸಾನಿಧ್ಯದಲ್ಲಿ ಹೆಚ್ಚು ಪ್ರಮಾಣದಲ್ಲಿ ಕರಗಿ ಹೆಚ್ಚು ಗುಣಗಳನ್ನು ಶೀಘ್ರವಾಗಿ ಕೊಡುತ್ತವೆ.

ಜೇನಿನಲ್ಲಿ ಬಹು ಸರಳ ರೂಪದ ಸಕ್ಕರೆಯಿರುವುದೇ ಅದರ ಹಿರಿಮೆಗೆ ಕಾರಣ. ಸುಲಭವಾಗಿ ಜೀರ್‍ಣವಾಗುವ ಶಕ್ತಿದಾಯಕವಾದ ಸರಳ ಸಕ್ಕರೆಯಿಂದಾಗಿ ಅಸ್ವಸ್ಥತೆಯಲ್ಲಾಗಲೀ, ಆರೋಗ್ಯದಲ್ಲಾಗಲೀ ಜೇನನ್ನು ನಿರಾತಂಕವಾಗಿ ಎಲ್ಲರೂ ಸೇವಿಸಬಹುದು.

ರೋಗ ನಿವಾರಕ

ಜೇನುತುಪ್ಪ ಪ್ರಬಲ ರೋಗ ನಿರೋಧಕ. ಕೆಂಪು ರಕ್ತಕಣಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇದು ಕೆಮ್ಮು, ಶೀತ ಮತ್ತು ಜ್ವರದ ವಿರುದ್ಧ ತಡೆಯಾಗಿಯೂ ಕೆಲಸ ಮಾಡುತ್ತದೆ. ಇದು ರಕ್ತ ಶುದ್ಧಿಕಾರಿಯಾಗಿಯೂ, ಕಣ್ಣಿನ ವ್ರಣ, ನಾಲಿಗೆ ವ್ರಣ, ಗಂಟಲು ಹುಣ್ಣು ಮತ್ತು ಸುಟ್ಟ ಗಾಯಗಳಿಗೆ ಬಹಳಷ್ಟು ಗುಣಕಾರಿಯಾಗಿದೆ.

ಮುಖದ ಮೇಲೆ ಮೊಡವೆಗಳುಳ್ಳವರು ಸ್ವಲ್ಪ ನಿಂಬೆರಸದೊಡನೆ ಜೇನನ್ನು ಬೆರಸಿ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಮಾಯವಾಗುವುದಲ್ಲದೆ ಚರ್‍ಮವೂ ಶುದ್ಧಿಯಾಗುತ್ತದೆ.

ದುಡಿತದಿಂದ ತುಂಬಾ ಬಳಲಿದವರು ಒಂದುವರೆ ಟೇಬಲ್ ಚಮಚ ಜೇನನ್ನು, ಚಳಿಗಾಲದಲ್ಲಾದರೆ ೧ ಗ್ಲಾಸ್ ಬಿಸಿ ನೀರಿನಲ್ಲಿ, ಬೇಸಿಗೆಯಲ್ಲಾದರೆ ತಣ್ಣಿರಿನಲ್ಲಿ ಸೇವಿಸಿದರೆ ತನ್ನ ಕಳೆದುಹೋದ ಶಕ್ತಿಯನ್ನು ಪುನಃ ಪಡೆಯುತ್ತಾರೆ.

ಕಂದುಬಣ್ಣದ ಜೇನುತುಪ್ಪದಲ್ಲಿ ಕಬ್ಬಿಣ, ಮ್ಯಾಂಗನೀಸ್ ಮತ್ತು ತಾಮ್ರದ ಪ್ರಮಾಣ ಹೆಚ್ಚಾಗಿರುವುದರಿಂದ ಇದರ ಸೇವನೆಯಿಂದ ಅನಿಮಿಯಾ ರೋಗವು ಕ್ರಮೇಣ ಗುಣ ಹೊಂದುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...