Home / ಲೇಖನ / ವಿಜ್ಞಾನ / ಜೇನು: ಆಹಾರ-ಔಷಧಿ

ಜೇನು: ಆಹಾರ-ಔಷಧಿ

“ಜೇನು” ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿಂದ ಹಳದಿ ಮತ್ತು ಕಡು ಹಳದಿ ಬಣ್ಣಗಳವರೆಗೆ ಜೇನಿನಲ್ಲಿ ವರ್‍ಣವೈವಿಧ್ಯವುಂಟು. ಜೇನು ಆಹಾರವೂ ಹೌದು, ಔಷಧವೂ ಹೌದು.

ಜೇನು ವೈದ್ಯಕೀಯ ಶಾಸ್ತ್ರದಲ್ಲಿ ಮತ್ತು ಆಯುರ್‍ವೇದ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಜೇನು ಹಾಲಿಗಿಂತಲೂ ಆರು ಪಟ್ಟು ಪೌಷ್ಟಿಕತೆ ಹೊಂದಿದೆ. ಬಿಳಿ ಬಣ್ಣದ ಜೇನು ತುಪ್ಪಕ್ಕಿಂದ ಕಂದು ಬಣ್ಣದ ಜೇನಿನಲ್ಲಿ ಪೌಷ್ಟಿಕ ಪ್ರಮಾಣ ಹೆಚ್ಚಾಗಿರುತ್ತದೆ. ಶಕ್ತಿಯನ್ನು ಒದಗಿಸುವಲ್ಲಿ ಜೇನಿಗೇ ಮೊದಲನೆ ಸ್ಥಾನ. ೧೦ ಟೇಬಲ್ ಚಮಚ (೨೦೦ ಗ್ರಾಂ)ದಷ್ಟು ಜೇನು, ೩೩೦ ಗ್ರಾಂ ಮಾಂಸ ಅಥವಾ ೧೦ ಕೋಳಿಮೊಟ್ಟೆ ಅಥವಾ ೮ ಕಿತ್ತಳೆಹಣ್ಣು ಅಥವಾ ೧ ಲೀಟರ್‍ ಹಾಲು ಒದಗಿಸುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶವನ್ನು ಒದಗಿಸುತ್ತದೆಯೆಂದಾಗ ಅದರ ಶಕ್ತಿಯ ಅರಿವಾಗದಿರದು. ಸುಮಾರು ೨೧ ಗ್ರಾಂ ಜೇನುತುಪ್ಪ ಸುಮಾರು ೬೭ ಕ್ಯಾಲೋರಿಗಳಷ್ಟು ಶಕ್ತಿಯನ್ನು ಒದಗಿಸಬಲ್ಲದು.

ಮುಖ್ಯವಾಗಿ ಜೇನಿನಲ್ಲಿ ಲೆವ್ಯೂಲೋಸ್ ಮತ್ತು ಡೆಕ್ಸ್‌ಟ್ರೋಸ್ ಎಂಬ ಸಕ್ಕರೆಗಳು ಇರುತ್ತವಾದರೂ, ಅದರಲ್ಲಿ ದೇಹಾರೋಗ್ಯಕ್ಕೆ ಅಗತ್ಯವಿರುವ ಹೆಚ್ಚು ಕಡಿಮೆ ಎಲ್ಲಾ ಖನಿಜ-ಲವಣಾಂಶಗಳು ಮತ್ತು ವಿಟಾಮಿನ್‌ಗಳು ಸಾಕಷ್ಟಿವೆ. ಜೇನುತುಪ್ಪದಲ್ಲಿರುವ ಕಬ್ಬಿಣ ಮತ್ತು ತಾಮ್ರದ ಅಂಶಗಳು ನೇರವಾಗಿ ಸಂಪೂರ್‍ಣವಾಗಿ ದೇಹದಲ್ಲಿ ಅರಗಿಕೊಂಡು ಬರುತ್ತವೆ. ಇದರ ಜೊತೆಗೆ ಇತರ ಪದಾರ್‍ಥಗಳು ಕೂಡ ಇದರ ಸಾನಿಧ್ಯದಲ್ಲಿ ಹೆಚ್ಚು ಪ್ರಮಾಣದಲ್ಲಿ ಕರಗಿ ಹೆಚ್ಚು ಗುಣಗಳನ್ನು ಶೀಘ್ರವಾಗಿ ಕೊಡುತ್ತವೆ.

ಜೇನಿನಲ್ಲಿ ಬಹು ಸರಳ ರೂಪದ ಸಕ್ಕರೆಯಿರುವುದೇ ಅದರ ಹಿರಿಮೆಗೆ ಕಾರಣ. ಸುಲಭವಾಗಿ ಜೀರ್‍ಣವಾಗುವ ಶಕ್ತಿದಾಯಕವಾದ ಸರಳ ಸಕ್ಕರೆಯಿಂದಾಗಿ ಅಸ್ವಸ್ಥತೆಯಲ್ಲಾಗಲೀ, ಆರೋಗ್ಯದಲ್ಲಾಗಲೀ ಜೇನನ್ನು ನಿರಾತಂಕವಾಗಿ ಎಲ್ಲರೂ ಸೇವಿಸಬಹುದು.

ರೋಗ ನಿವಾರಕ

ಜೇನುತುಪ್ಪ ಪ್ರಬಲ ರೋಗ ನಿರೋಧಕ. ಕೆಂಪು ರಕ್ತಕಣಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇದು ಕೆಮ್ಮು, ಶೀತ ಮತ್ತು ಜ್ವರದ ವಿರುದ್ಧ ತಡೆಯಾಗಿಯೂ ಕೆಲಸ ಮಾಡುತ್ತದೆ. ಇದು ರಕ್ತ ಶುದ್ಧಿಕಾರಿಯಾಗಿಯೂ, ಕಣ್ಣಿನ ವ್ರಣ, ನಾಲಿಗೆ ವ್ರಣ, ಗಂಟಲು ಹುಣ್ಣು ಮತ್ತು ಸುಟ್ಟ ಗಾಯಗಳಿಗೆ ಬಹಳಷ್ಟು ಗುಣಕಾರಿಯಾಗಿದೆ.

ಮುಖದ ಮೇಲೆ ಮೊಡವೆಗಳುಳ್ಳವರು ಸ್ವಲ್ಪ ನಿಂಬೆರಸದೊಡನೆ ಜೇನನ್ನು ಬೆರಸಿ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಮಾಯವಾಗುವುದಲ್ಲದೆ ಚರ್‍ಮವೂ ಶುದ್ಧಿಯಾಗುತ್ತದೆ.

ದುಡಿತದಿಂದ ತುಂಬಾ ಬಳಲಿದವರು ಒಂದುವರೆ ಟೇಬಲ್ ಚಮಚ ಜೇನನ್ನು, ಚಳಿಗಾಲದಲ್ಲಾದರೆ ೧ ಗ್ಲಾಸ್ ಬಿಸಿ ನೀರಿನಲ್ಲಿ, ಬೇಸಿಗೆಯಲ್ಲಾದರೆ ತಣ್ಣಿರಿನಲ್ಲಿ ಸೇವಿಸಿದರೆ ತನ್ನ ಕಳೆದುಹೋದ ಶಕ್ತಿಯನ್ನು ಪುನಃ ಪಡೆಯುತ್ತಾರೆ.

ಕಂದುಬಣ್ಣದ ಜೇನುತುಪ್ಪದಲ್ಲಿ ಕಬ್ಬಿಣ, ಮ್ಯಾಂಗನೀಸ್ ಮತ್ತು ತಾಮ್ರದ ಪ್ರಮಾಣ ಹೆಚ್ಚಾಗಿರುವುದರಿಂದ ಇದರ ಸೇವನೆಯಿಂದ ಅನಿಮಿಯಾ ರೋಗವು ಕ್ರಮೇಣ ಗುಣ ಹೊಂದುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...