ತತ್ವಬೋಧದೊಳಗಿದ್ದು ಭವಬಾಧೆಯನು ಗೆದ್ದು

ತತ್ವಬೋಧದೊಳಗಿದ್ದು ಭವಬಾಧೆಯನು ಗೆದ್ದು;
ಪರನಾದದೊಳಗಿದ್ದ ಮೇಲೆ ಮರುಳೆ
ಬೋದವಾದಿಕರು ಬಹುತರದಿ ಬಗಳುವ ಜನರಪ-
ವಾದಕಂಜುವದ್ಯಾಕಲೇ ಮರುಳೆ                   ||೧||

ಗುರುಕರುಣ ತೀರ್ಥ ಪ್ರಸಾದ ತುಂಬಿದ ಪಾತ್ರೆ
ಕರಮುಟ್ಟಿ ಸವಿದು ಸುಖದಿ ಮೆರೆದು ಶರೀರವನು
ಮರೆದು ಮನ ಪರವಶದಿ ತಿರುಗುತಿರೆ
ನರಗುರಿಗಳ ಹಂಗೇನಲೇ ಮರುಳೆ               ||೨||

ಮಿಥ್ಯಾವಾಸನೆಯನಳಿದು ಮಾಯಾ ಮೋಹವ ತುಳಿದು
ಸಿದ್ಧಜ್ಞಾನ ಮನೆಯೊಳು ಇರುತಿರೆ
ಕದ್ದಡಗಲಿಬ್ಯಾಡ ಕರ್ಮಿಗಳ ಕಂಡರೆ ಕಾಲಿ-
ಲೊದ್ದು ಮುಂದಕೆ ನಡಿಯಲೋ ಮರುಳೆ               ||೩||

ತಂದೆ ಶಿಶುನಾಳ ಸದ್ಗುರುವರನು ಪಾಲಿಸಿದ
ಬಿಂದು ವಸ್ತುವಿನ ರುಚಿಯಾ ಕೊಂಡು
ಮಂದಮತಿಗಳು ನುಡಿದ ಮಾತಿಗೆ ಅಳುಕದೆ
ಅಂದದಲಿ ನಡಿದಾಡುತಿರೆ ಮರುಳೆ                 ||೪||
****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸರಿಗಾಣೆನು ಧರಣಿಯೊಳಗಮ್ಮ
Next post ಅಪ್ಪಾ ಆರಿಗೆ ಸಿಗದ ಬದುಕಿನೊಳಿಟ್ಟಾ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…