ಕರ್ಣಬಂದು ಕರ್ಬಲದಲಿ ಪಾರ್ಥಾ
ವರ್ನಕಂಡು ಕದನಕ ನಿಂತ ಸು-       ||ಪ||
ವರ್ಣಪೀಠ ಮದೀನ ಶಾರದಿ
ಪರ್ವ ಅಶ್ವನೇರಿದನೆಂತು             ||ಅ.ಪ.||

ಭಾಪುರೆ ಅರ್ಜುನ ತಪ್ಪಿಸಿ ಹರಿತ
ವರ್ನ ಕೋಪ ತಿಳಿ ಕುರುಕ್ಷೇತ್ರದಲಿ
ಭಾಪುರೆ ನಿನ್ನನು ಹುಡಕುತ ಬಂದೆನು
ಛೇತಕಿ ಪಾತಕಿ ಕ್ಷತ್ರಿಯರಲ್ಲಿ            ||೧||

ಹಸೇನಿ ಹುಸೇನಿ ಎರಡರ ಮಧ್ಯದಿ
ಬಂದು ಸಿಕ್ಕಿಯೋ ಸಮರದಲಿ
ಸಮ್ಮುಖದಿ ಕೇಶವನ ಸಹಾಯಕೆ
ಬಂದನು ಏಕಕಾಲದಲ್ಲಿ                || ೨ ||

ಹ್ಯಾಂಗ ಮರಣ ತರಬೇಕೆನುತಲಿ ಹರಿ
ಬ್ಯಾಗ ಬ್ರಾಹ್ಮಣನ ರೂಪಾಗಿ
ಆಗ ಬಾಕಿಲಿಂದ ಬಗಿದು ಚಲ್ಲಿದನು
ಆರ್ಜುನ ಶರದಿ                     || ೩ ||

ವಸುಧಿಯೊಳಗ ಹೊಸದಾದ ರಿವಾಯತ
ಕರ್ಣಪರ್ವ ಐಸುರದಿ
ರಸಿಕರೆಲ್ಲರು ಕರ್ಬಲದಾಟಕ
ದಶದಿನ ಹಾಡಿರಿ ಸಂತೋಷದಿ
ಉಸುರಿದ ಮೊಹರಮ್ಮ ಹಬ್ಬದೊಳಗೆ
ಶಿಶುನಾಳಧೀಶನ ಹೆಸರುಗೊಂಡು ಪೇಳರಿ ಮುದದಿ ||೪|

*****