ಕರ್ಣಬಂದು ಕರ್ಬಲದಲಿ ಪಾರ್ಥಾ

ಕರ್ಣಬಂದು ಕರ್ಬಲದಲಿ ಪಾರ್ಥಾ
ವರ್ನಕಂಡು ಕದನಕ ನಿಂತ ಸು-       ||ಪ||
ವರ್ಣಪೀಠ ಮದೀನ ಶಾರದಿ
ಪರ್ವ ಅಶ್ವನೇರಿದನೆಂತು             ||ಅ.ಪ.||

ಭಾಪುರೆ ಅರ್ಜುನ ತಪ್ಪಿಸಿ ಹರಿತ
ವರ್ನ ಕೋಪ ತಿಳಿ ಕುರುಕ್ಷೇತ್ರದಲಿ
ಭಾಪುರೆ ನಿನ್ನನು ಹುಡಕುತ ಬಂದೆನು
ಛೇತಕಿ ಪಾತಕಿ ಕ್ಷತ್ರಿಯರಲ್ಲಿ            ||೧||

ಹಸೇನಿ ಹುಸೇನಿ ಎರಡರ ಮಧ್ಯದಿ
ಬಂದು ಸಿಕ್ಕಿಯೋ ಸಮರದಲಿ
ಸಮ್ಮುಖದಿ ಕೇಶವನ ಸಹಾಯಕೆ
ಬಂದನು ಏಕಕಾಲದಲ್ಲಿ                || ೨ ||

ಹ್ಯಾಂಗ ಮರಣ ತರಬೇಕೆನುತಲಿ ಹರಿ
ಬ್ಯಾಗ ಬ್ರಾಹ್ಮಣನ ರೂಪಾಗಿ
ಆಗ ಬಾಕಿಲಿಂದ ಬಗಿದು ಚಲ್ಲಿದನು
ಆರ್ಜುನ ಶರದಿ                     || ೩ ||

ವಸುಧಿಯೊಳಗ ಹೊಸದಾದ ರಿವಾಯತ
ಕರ್ಣಪರ್ವ ಐಸುರದಿ
ರಸಿಕರೆಲ್ಲರು ಕರ್ಬಲದಾಟಕ
ದಶದಿನ ಹಾಡಿರಿ ಸಂತೋಷದಿ
ಉಸುರಿದ ಮೊಹರಮ್ಮ ಹಬ್ಬದೊಳಗೆ
ಶಿಶುನಾಳಧೀಶನ ಹೆಸರುಗೊಂಡು ಪೇಳರಿ ಮುದದಿ ||೪|

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುರುಬರು ನಿನ್ನ ಮರೆತೇಬಿಟ್ರಲ್ಲೋ ಕನಕ…!
Next post ನಗೆ ಡಂಗುರ – ೫೮

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…