ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ?
Next post ಇಮ್ರಾನ್ ಗುಡಿಯಾ ಈಗ ಸಾನಿಯಾ ಚಡ್ಡಿ ಮ್ಯಾಗೆ ಕೆಂಗಣ್ಣು

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…