Home / ಕವನ / ಕವಿತೆ / ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...