Home / ಕವನ / ಕವಿತೆ / ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...