Home / ಕವನ / ಕವಿತೆ / ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...