Home / ಕವನ / ಕವಿತೆ / ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ