Home / ಕವನ / ಕವಿತೆ / ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...