ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು
ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ||

ಕೂಪದೊಳು ಹರಿದಾಡುತಿಹ ಜಲ
ವ್ಯಾಪಿಸಿತು ಮುದ್ದಿನ ಸಲಾಕೆಯು
ರೂಪ ಬೆಂಕಿಯ ಪುಟವಗೊಳ್ಳುತ
ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.||

ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ
ಮದ್ದು ಹೇರಿಸುವ ಆಗೀನ ಗಾಡಿಯೋ
ಚೋದ್ಯವಾಯಿತು ಚಮತ್ಕಾರದಿ
ಎದ್ದು ತಾನೇ ತಾನೇ ಬರುವುದು
ಗದ್ದಲದಿ ಸಾಗುವದು ಆದರೊಳು
ಇದ್ದಲಿಯ ಮಸಿಬಿದ್ದು ಬಯಲದಿ   ||೧||

ಅಬ್ಬರದಿಂದ ಮಕಾನದ ಹೊಲಕೆಲ್ಲ
ಗೊಬ್ಬರ ಹೇರುವ ಅಗೀನ ಗಾಡಿಯೋ
ಸಬ್ಬಯಲಿನೊಳು ಸರಸಿ ಬರುವಾಗ
ನಿಬ್ಬಯಲ ನಿಜತತ್ವ ಮಾಗ೯ದಿ
ಕೊಬ್ಬಿಕೊಂಡಿಹ ಕಮಲ ಚಕ್ರದಿ
ಗಬ್ಬಿನೊಳು ಗಮಕದಿ ಬರುವದೋ    ||೨||

ಕರ್ಬಲದೊಳಗೆಲ್ಲ ಕಟಗಿ ಹೊತ್ತು ಹಾಕಿ
ಉಬ್ಬೇರಿ ಬರುವ ಅಗೀನ ಗಾಡಿಯೋ
ಆರ್ಭಟಿಸಿ ಜಲವಾಯು ಸೂಸುತ
ಪೆರ್ಬುಲಿಯ ತೆರದಿಂದ ಒದರುತ
ಆಬ್ಬರದಿ ಹರದಾಡುವದು ಬಲು
ಹಬ್ಬಿಕೊಂಡಿತು ಹಲವು ಲೋಕದಿ     ||೩||

ಕ್ಷೋಣಿಪರಾಜನ ಶಹಾನ ದೊರಗಳ
ಠಾಣಿದೊಳಗಿರುವ ಅಗೀನ ಗಾಡಿಯೋ
ಪಾಣಿ ಅಲಗು ಸಮಸ್ತ ಆಯುಧ
ಕ್ಷೀಣವಿಲ್ಲದೆ ತುಂಬ ತವಕದಿ
ಬಾಣ ಬಿಲ್ಲುಗಳಿಡಿಸಿ ಬೇಗನೆ
ರಾಣಿ ಸರಕಾರ ಸದರಿನೊಳು           ||೪||

ಧರೆಯೊಳು ದಕ್ಷಿಣ ದೇಶದೊಳಗೆಲ್ಲ
ಅರಳಿ ಹೇರಿಸುವ ಅಗೀನ ಗಾಡಿಯೋ
ಸರಸದಿಂ ವಿಸ್ತರಿಸಿ ಪೇಳುವೆ
ವರ ಶಿಶುನಾಳಧೀಶನಾಜ್ಞೆಯ
ಮೆರೆಸಿದರು ಇಂಗ್ಲೀಷದೊರೆಗಳು
ಸರ್ವರಿಗೆ ಆಶ್ಚರ್ಯವಾಯಿತು         ||೫||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ?
Next post ಇಮ್ರಾನ್ ಗುಡಿಯಾ ಈಗ ಸಾನಿಯಾ ಚಡ್ಡಿ ಮ್ಯಾಗೆ ಕೆಂಗಣ್ಣು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys