ನವಾಬಿ ಮಲ್ಲಿಗಿ ಹೂವಿನ ಗಜರಾ

ನವಾಬಿ ಮಲ್ಲಿಗಿ ಹೂವಿನ ಗಜರಾ
ಹಾಕಿದಿ ಗಜರಾ ಪುತ್ತಳಿ ಸರಾ
ಬಾಗಲಕೋಟಿ ಬಾವಿ ಸಮಾಲಾ
ಸವಣೂರ ಶಾರದೊರಿ
ಮಲ್ಲಿಗಿ ಹೂವಿನ ಗಜರಾ  ||೧||

ಇಂಗ್ಲೀಷ ಸರಕಾರ
ಕಂಪನಿ ದರಬಾರ
ಹೇಳಿದ ವಿಚಾರ
ತಾಳಿದ ಸರಕಾರ
ಮಲ್ಲಿಗಿ ಹೂವಿನ ಗಜರಾ  ||೨||

ಶಿಶುನಾಳ ಶಾಹೀರ
ಅಸಲ ಕಿತಾಬರ
ಉಸುರಿದ ಮಾತಿಗೆ
ಕಾದರಲಿಂಗನ ಪುತ್ತರ
ಮಲ್ಲಿಗಿ ಹೂವಿನ ಗಜರಾ  ||೩||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಮ್ರಾನ್ ಗುಡಿಯಾ ಈಗ ಸಾನಿಯಾ ಚಡ್ಡಿ ಮ್ಯಾಗೆ ಕೆಂಗಣ್ಣು
Next post ತಂತಾನೆ ನೋಡಿಕೊಂಡರೆ?

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…