Home / ಕವನ / ಕವಿತೆ / ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ
ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ  ||ಪ||

ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ
ಮೋಸದಿ ಸಿಲುಕಿತು ಅರಸನ ಕೈಸೇರಿ  ||ಅ.ಪ.||

ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ
ಅಗಲಿದಿಯಾ ಅಯ್ಯೋ ಬಾಲಗೋಪಾಲ
ಅರಸನಿಗೆ ಕರುಣ ಬರಲಿಲ್ಲರಿ
ಮುಖಭಂಗವಾಗಿತ್ತು ದುಃಖದೊಳು ಚಿಗರಿ  ||೧||

ಮನಿಗೆ ಹೋಗಿ ಮಕ್ಕಳ ನೋಡಿ ಬರುವೆನ್ರಿ
ಬೇಕಾರದವ್ರ ಬೇಡ್ರಿ ಕೊಡುನೆನು ಜಾಮೀನ್ರಿ
ಮೃಗಜಾತಿ ನಿನ್ನ ನಂಬಿಗೆಯೇನು
ಅಡವಿಯಲ್ಲಿ ಮೇಯುತ್ತಿದ್ದಿ ಬೆದರಿ  ||೨||

ಶರಣರ ಚರಣಕ್ಕೆ ಎರಗಿತು ಚಿಗರಿ
ಅರಸನ ಕೈಯೊಳಗಿಂದ ಬಿಡಿಸಿರಿ
ಅರವುಳ್ಳ ಶರಣರು ಕಕಲಾತಿ ಮಾಡಿದರು
ಸಕಲಸಂಪನ್ನರಾಗಿ ಬಿಡಿಸಿದರು ಚಿಗುರಿ  ||೩||

ಕರಮುಗದು ಚಿಗರಿ ವಂದನಮಾಡಿ
ಸೆರಮನಿ ಬಿಡಿಸಿರಿ ಕರುಣೆಮಾಡಿ
ಎರಡು ಮಕ್ಕಳ ತಂದು ಶರಣರ ಮುಂದೆ
ಅಡಿದಾವರೆಗೆ ಒಪ್ಪಿಸೇನಿ ಬೇಕಾದ್ದಮಾಡ್ರಿ  ||೪||

ಮಕ್ಕಳು ಅಂದಾವು ಮುಂಚೆ ನಮ್ಮನ್ನು ಕೊಯ್ಯಿರಿ
ನಮ್ಮ ತಾಯಿ ಸಲಹಿ ನೀವು ಹಿತವಂತರಾಗಿರಿ
ಅರಸನ ಮನಸಿಗೆ ಆದೀತೋ ಫನಶಾಂತಿ
ಅನುಮಾನ ಯಾತಕ್ಕೆ ಹೋಗು ಚಿಗರಿ  ||೫||

ಶರಣರ ಅನುಗ್ರಹದಿ ಉಳಿದಾವು ಮೂರು ಜನ್ಮ
ಸರ್ವಜನರು ಅನ್ನುವರು ಶರೀಫಸಾಹೇಬನ ಕಲ್ಮಾ
ಅಲ್ಲಮನ ಧ್ಯಾನ ಕಲ್ಮಾನ ಸೂತ್ರ
ಬಹದ್ದೂರ ಗೋವಿಂದನ ಧ್ಯಾನ  ||೬||

*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...