ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ
ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ  ||ಪ||

ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ
ಮೋಸದಿ ಸಿಲುಕಿತು ಅರಸನ ಕೈಸೇರಿ  ||ಅ.ಪ.||

ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ
ಅಗಲಿದಿಯಾ ಅಯ್ಯೋ ಬಾಲಗೋಪಾಲ
ಅರಸನಿಗೆ ಕರುಣ ಬರಲಿಲ್ಲರಿ
ಮುಖಭಂಗವಾಗಿತ್ತು ದುಃಖದೊಳು ಚಿಗರಿ  ||೧||

ಮನಿಗೆ ಹೋಗಿ ಮಕ್ಕಳ ನೋಡಿ ಬರುವೆನ್ರಿ
ಬೇಕಾರದವ್ರ ಬೇಡ್ರಿ ಕೊಡುನೆನು ಜಾಮೀನ್ರಿ
ಮೃಗಜಾತಿ ನಿನ್ನ ನಂಬಿಗೆಯೇನು
ಅಡವಿಯಲ್ಲಿ ಮೇಯುತ್ತಿದ್ದಿ ಬೆದರಿ  ||೨||

ಶರಣರ ಚರಣಕ್ಕೆ ಎರಗಿತು ಚಿಗರಿ
ಅರಸನ ಕೈಯೊಳಗಿಂದ ಬಿಡಿಸಿರಿ
ಅರವುಳ್ಳ ಶರಣರು ಕಕಲಾತಿ ಮಾಡಿದರು
ಸಕಲಸಂಪನ್ನರಾಗಿ ಬಿಡಿಸಿದರು ಚಿಗುರಿ  ||೩||

ಕರಮುಗದು ಚಿಗರಿ ವಂದನಮಾಡಿ
ಸೆರಮನಿ ಬಿಡಿಸಿರಿ ಕರುಣೆಮಾಡಿ
ಎರಡು ಮಕ್ಕಳ ತಂದು ಶರಣರ ಮುಂದೆ
ಅಡಿದಾವರೆಗೆ ಒಪ್ಪಿಸೇನಿ ಬೇಕಾದ್ದಮಾಡ್ರಿ  ||೪||

ಮಕ್ಕಳು ಅಂದಾವು ಮುಂಚೆ ನಮ್ಮನ್ನು ಕೊಯ್ಯಿರಿ
ನಮ್ಮ ತಾಯಿ ಸಲಹಿ ನೀವು ಹಿತವಂತರಾಗಿರಿ
ಅರಸನ ಮನಸಿಗೆ ಆದೀತೋ ಫನಶಾಂತಿ
ಅನುಮಾನ ಯಾತಕ್ಕೆ ಹೋಗು ಚಿಗರಿ  ||೫||

ಶರಣರ ಅನುಗ್ರಹದಿ ಉಳಿದಾವು ಮೂರು ಜನ್ಮ
ಸರ್ವಜನರು ಅನ್ನುವರು ಶರೀಫಸಾಹೇಬನ ಕಲ್ಮಾ
ಅಲ್ಲಮನ ಧ್ಯಾನ ಕಲ್ಮಾನ ಸೂತ್ರ
ಬಹದ್ದೂರ ಗೋವಿಂದನ ಧ್ಯಾನ  ||೬||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆ ಹೀಗೆ ಬೀಸುತ್ತಿರಬೇಕು ಗಾಳಿ….
Next post ಅಹಿಂದ ಕೊಹಿಂದ ವಿಹಿಂದ ಆಮೇಲೆ ಗೋ‌ಇಂದ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys