Home / ಕವನ / ಕವಿತೆ / ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ
ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ  ||ಪ||

ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ
ಮೋಸದಿ ಸಿಲುಕಿತು ಅರಸನ ಕೈಸೇರಿ  ||ಅ.ಪ.||

ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ
ಅಗಲಿದಿಯಾ ಅಯ್ಯೋ ಬಾಲಗೋಪಾಲ
ಅರಸನಿಗೆ ಕರುಣ ಬರಲಿಲ್ಲರಿ
ಮುಖಭಂಗವಾಗಿತ್ತು ದುಃಖದೊಳು ಚಿಗರಿ  ||೧||

ಮನಿಗೆ ಹೋಗಿ ಮಕ್ಕಳ ನೋಡಿ ಬರುವೆನ್ರಿ
ಬೇಕಾರದವ್ರ ಬೇಡ್ರಿ ಕೊಡುನೆನು ಜಾಮೀನ್ರಿ
ಮೃಗಜಾತಿ ನಿನ್ನ ನಂಬಿಗೆಯೇನು
ಅಡವಿಯಲ್ಲಿ ಮೇಯುತ್ತಿದ್ದಿ ಬೆದರಿ  ||೨||

ಶರಣರ ಚರಣಕ್ಕೆ ಎರಗಿತು ಚಿಗರಿ
ಅರಸನ ಕೈಯೊಳಗಿಂದ ಬಿಡಿಸಿರಿ
ಅರವುಳ್ಳ ಶರಣರು ಕಕಲಾತಿ ಮಾಡಿದರು
ಸಕಲಸಂಪನ್ನರಾಗಿ ಬಿಡಿಸಿದರು ಚಿಗುರಿ  ||೩||

ಕರಮುಗದು ಚಿಗರಿ ವಂದನಮಾಡಿ
ಸೆರಮನಿ ಬಿಡಿಸಿರಿ ಕರುಣೆಮಾಡಿ
ಎರಡು ಮಕ್ಕಳ ತಂದು ಶರಣರ ಮುಂದೆ
ಅಡಿದಾವರೆಗೆ ಒಪ್ಪಿಸೇನಿ ಬೇಕಾದ್ದಮಾಡ್ರಿ  ||೪||

ಮಕ್ಕಳು ಅಂದಾವು ಮುಂಚೆ ನಮ್ಮನ್ನು ಕೊಯ್ಯಿರಿ
ನಮ್ಮ ತಾಯಿ ಸಲಹಿ ನೀವು ಹಿತವಂತರಾಗಿರಿ
ಅರಸನ ಮನಸಿಗೆ ಆದೀತೋ ಫನಶಾಂತಿ
ಅನುಮಾನ ಯಾತಕ್ಕೆ ಹೋಗು ಚಿಗರಿ  ||೫||

ಶರಣರ ಅನುಗ್ರಹದಿ ಉಳಿದಾವು ಮೂರು ಜನ್ಮ
ಸರ್ವಜನರು ಅನ್ನುವರು ಶರೀಫಸಾಹೇಬನ ಕಲ್ಮಾ
ಅಲ್ಲಮನ ಧ್ಯಾನ ಕಲ್ಮಾನ ಸೂತ್ರ
ಬಹದ್ದೂರ ಗೋವಿಂದನ ಧ್ಯಾನ  ||೬||

*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ