ಚಿಗುರು ಮೌನ

ಕರಿ ಎರಿ ಹೊಲದಲ್ಲಿ ಘಮ್ಮೆಂದು
ಕೆಂಪು ಹಾಯ್ದ ಬಳಿಜೋಳದ ತೆನೆ
ತೆನೆಗಳಲಿ ಹಕ್ಕಿಹಿಂಡು ಹಾಡು ಬಿಚ್ಚಿ
ಕೊಂಡ ಅನವು ಹೆಚ್ಚಾಗಿ ಹರಡಿತು
ಭೂಮಿ ಎದೆ ಕುಬುಸ ಬಿಚ್ಚಿಕೊಂಡ ಉಲಿತ.

ಮಾಗಿದ ಚಳಿಯ ಪದರಲಿ
ಸೋಸಿ ಸೂಸಿದ ಚಿಗುರ ಗಂಧಗಾಳಿ
ತೂರಿ ಜಿಗಿದವು ಕನಸುಗಳು
ಹೊಳೆ ಹೊಳೆದವು ಮನಸುಗಳು
ಮಾಗಿದ ಬಿಸಿಲಿನಲಿ ಕೊಡಲೆ ಹಾಸಿದವು ಕಾಳುಗಳು

ಒಡಲ ಹಸಿವಿಗೆ ತೆರೆದ ಬಯಲು
ಹಿಟ್ಟು ನಾದಿನಾದಿ ನಿಗಿ ನಿಗಿ ಸುಡುವ
ಬೆಂಕಿಯ ಮೇಲೆ ಹಂಚು ರಾಯ್ದು
ತಟ್ಟಿ ಏರಿಸಿದ ಎದೆಯ ಹದದ ರೊಟ್ಟಿ
ಕಳಚಿಕೊಂಡ ಎಲ್ಲಾ ಗುಡ್ಡೆಗಳ ಮೌನ ಕಂಪನಗಳು

ಹಸಿವಿಗೆ ಹಸಿರು, ನೀರು ಹಸಿರಿಗೆ,
ನೀರಿಗೆ ಮೋಡ, ಭವಕಂಪನ ಮೋಡಕೆ,
ಭೂಮಿಯ ಸೀಳುವ ಚಿಗುರ ಚೈತನ್ಯ,
ಸಣ್ಣ ಬೆಂಕಿಯಲಿ ಅರಳುವ ಅನಂತ ಮೌನ.
ಒಡೆಯದೇ ತಡೆಯದೇ ಹರಡಿದ ಬದುಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೨

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…