ಒಡತಿ

ಸಾಲುಗಟ್ಟಿ ಸಾಗಿದ ಇರುವೆಗಳು
ಕವಿತೆ ಮೆರವಣಿಗೆ ಹೊರಟವೆ
ಶಬ್ದಗಳ ಸೂಕ್ಷ್ಮ ಜೇಡನ ಬರೆಯಲಿ
ಸಿಲುಕಿ ಹೊರ ಬರಲಾರದೇ ಒದ್ದಾಡಿವೆ

ಸುರಿದ ಮಳೆ ಅಂಗಳದ ಥಂಡಿ
ಹರಡಿ ಹಾಸಿದ ಹನಿ ಹನಿಯ
ಹೆಗ್ಗುರುತು ಗುಳಿಯಲಿ ಅವಳ
ಕಣ್ಣುಳು ಏನೋ ಅರಸಿ ಬಳಲಿವೆ

ಕರಿಮೋಡದ ತೇಲು ಬಾನಿನಗಲ
ಹಾಸಿದ ಇರುಳಲ್ಲದ ಹಗಲು ಮುಬ್ಬು
ಸಂಜೆ ಮಲ್ಲಿಗೆ ಅರಳಿ ಸೂಸಿದ ಕಂಪು
ಗಾಳಿಯಲಿ ತೇಲಾಡಿವೆ ಹೊಂಗೂದಲು

ಸುರಿದ ಮಳೆ ಭರತ ಸೆಳೆತ
ತೋಡು ಸಂಕ ನದಿಯಾಗಿ ಸೇರುವ
ಗೊಂದಲದ ಅಲೆಗಳು ಸಾಗರ ತುಂಬಿ
ಆಳದ ನಿರಾಳದಲಿ ನೀರವ ಶಾಂತ ಕವಿತೆ

ಮರಗಿಡಗಳು ಹಕ್ಕಿಕೊರಳು
ಮಿಂದನೆಂದ ನೆಲಮುಗಿಲುಗಳು
ಮನಸ್ಸಿನ ಸೂಕ್ಷ್ಮ ಸಾಮರ್ಥ್ಯಗಳ
ರಹಸ್ಯ ಒಡೆಯುವ ಮಾಟಗಾತಿ ನನ್ನೊಡತಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಿಸರ ಪ್ರಜ್ಞೆ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೪

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…