ಕಲ್ಯಾಣದ ದಾರಿತುಂಬ

ಪ್ರತಿ ಹಕ್ಕಿಯ ಕೊರಳ ತುಂಬಾ
ಧ್ವನಿಸುವ ಹಾಡು ನನ್ನ ನಿನ್ನ ಪ್ರೇಮ
ನಲಿಯುವ ಉಲಿಯುವ ಹಾಡಾಗಿ
ಸೂರ್ಯ ಕಿರಣ ಚೆಲ್ಲಿದ್ದಾನೆ ಶುಭ ಮುಂಜಾವಿನಲಿ.

ಅರಿಕೆಗೊಂಡ ಪ್ರೀತಿ ಪ್ರತಿ ಹನಿಹನಿ
ಚಿಮ್ಮಿ ಲಹರಿಯ ತೇಲಿ ಸಾಗಿವೆ ಸಾಕ್ಷಿ
ಬೀಜಗಳು ಚಿಗುರುವ ಮೊಳಕೆಯಾಗಿ
ಮರು ಹುಟ್ಟಿನ ಹಸಿರು ರೂಪಕಗಳಲಿ.

ಬಯಲ ಭಾಷೆಯಲಿ ಮೌನ ಮಾತು
ತೆರೆಯದಿದ್ದರು ಅರ್ಥ ಹೊಮ್ಮುವ ನಾದ
ಪ್ರತಿಮೆಗಳು ಹಣತೆಯಲ್ಲಿ ದೀಪಗಳು
ಸಂಜೆ ದೇವರು ಮನೆಯ ಬಿಂಬದಲ್ಲಿ
ಸಾವಿರಾರು ಚಿಕ್ಕೆಗಳ ಫಳಫಳ.

ನೀಲ ರಾಶಿ ನೀರ ರಾಶಿ ಒಲವರಾಶಿ
ಬೀಜ ರಾಶಿಗಳಲಿ ಎದೆಯ ಹದ
ಮುದವಾಗಿ ತೀಡಿತೀಡಿ ಎದ್ದ ಕವಿತೆಗಳು
ದಾರಿಯಲಿ ಸವೆದ ಚಂದ್ರನ ತುಂಬಾ ಬೆಳದಿಂಗಳು.

ಹಕ್ಕಿಯೊಂದು ಹಾರಿಬಂದು ಭಾವ
ಚಂದ್ರನಲಿ ಬೆಳದಿಂಗಳು ತುಂಬಿ
ಅವನ ಬೆಳಕಿಂಡಿ ಇವಳ ಕನಸುಗಳಲಿ
ಬಿಂದು ಬಿಂದು-ವಿನಿಂದು ಚಲಿಸಿದ
ಅಲ್ಲಮನ ರಂಗೋಲಿ ಕಲ್ಯಾಣದ ದಾರಿತುಂಬ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ೫೦ ಸಾವಿರ ವರ್ಷದ ನಂತರ ಭೂಮಿಗಿಳಿಯುವಂತೆ ಮಾಡಿದ ಕೃತಕ ಉಪಗ್ರಹ : ಕಾಲಕೋಶ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೮

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys