ಹಿತ್ತಲಲ್ಲಿ ಅಮ್ಮ

ಬೀಜ ಬಿತ್ತಿದ ಅಮ್ಮನ ಹಿತ್ತಲಲಿ
ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ
ಅರಳಿ ಘಮ್ಮೆಂದು ಸೂಸಿ ನೆಲತುಂಬ
ಹರಡಿ ಹಾಸಿದ ಪಾರಿಜಾತ ಹೂರಾಶಿ.

ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ
ಮೂಡಿವೆ ಅವಳ ಕೈ ಬೆರಳ ಬಳೆಗಳ
ಚಿಕ್ಕೀ ನಾದ ರೇಖೆಗಳು ಚಿತ್ತ ಪಟ
ಪಾತರಗಿತ್ತಿಗಳ ಹಾರಾಟ ಎದೆಯೊಳಕೆ ಇಳಿದ ರಸಕಾವ್ಯ.

ಇಲ್ಲಿಯೇ ಇದ್ದ ತುಳಸಿ ಕಟ್ಟೆಯ
ಬಳಿ ಉರಿದ ನಂದಾದೀಪ ಅವಳ
ಕಣ್ಣಕಾಂತಿ ಚಿಗುರಿ ಹರಡಿದ ಬೆಳದಿಂಗಳು
ಮನದ ಮರದ ತುಂಬೆಲ್ಲ ಟೊಂಗೆ
ಟೊಂಗೆಗೆ ಮಿಂಚು ಹುಳುಗಳ ಮಿಣಿಮಿಣಿ ಭಾವ.

ಈ ಬಾವಿಕಟ್ಟೆಯ ತುಂಬಾ
ಅವಳ ಅನಂತ ಆಕಾಶ ಥಳಥಳ
ಹೊಳೆದ ಸೂರ್ಯ ಪ್ರೀತಿ ಮೊಗೆದು
ಹಬ್ಬಿ ಹದವಾಗಿ ಮುದವಾಗಿ ಅರಳಿದ
ಸಂಪಿಗೆ ಸೂಸಿತು ಸೀರೆಯ ಸರಭರ ಸಖೀ ಗೀತೆ.

ಹಿಮಗಿರಿಯ ಗಂಗೆ ಹರಿದ ಸೋಪಾನ
ಬಯಲು ಬೆಟ್ಟ ನದಿ ಕಾಡ ತುಂಬ
ಅರಿವು ಭಕ್ತಿ ಪ್ರೀತಿಗೆ ಒಲಿದ ಅವಳ
ಪ್ರೇಮ ಕಾವ್ಯ ಸಾಕಾರ ಹನಿ ಹನಿ
ಉಣಿಸಿದ ಬದುಕು ತಂಪು ಹೊಸ ಕಾವ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿಕ್ಷಣದ ಭಾಷೆ ಯಾವುದಿರಬೇಕು?
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೯

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys