Home / ಕವನ / ಕವಿತೆ / ಹಿತ್ತಲಲ್ಲಿ ಅಮ್ಮ

ಹಿತ್ತಲಲ್ಲಿ ಅಮ್ಮ

ಬೀಜ ಬಿತ್ತಿದ ಅಮ್ಮನ ಹಿತ್ತಲಲಿ
ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ
ಅರಳಿ ಘಮ್ಮೆಂದು ಸೂಸಿ ನೆಲತುಂಬ
ಹರಡಿ ಹಾಸಿದ ಪಾರಿಜಾತ ಹೂರಾಶಿ.

ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ
ಮೂಡಿವೆ ಅವಳ ಕೈ ಬೆರಳ ಬಳೆಗಳ
ಚಿಕ್ಕೀ ನಾದ ರೇಖೆಗಳು ಚಿತ್ತ ಪಟ
ಪಾತರಗಿತ್ತಿಗಳ ಹಾರಾಟ ಎದೆಯೊಳಕೆ ಇಳಿದ ರಸಕಾವ್ಯ.

ಇಲ್ಲಿಯೇ ಇದ್ದ ತುಳಸಿ ಕಟ್ಟೆಯ
ಬಳಿ ಉರಿದ ನಂದಾದೀಪ ಅವಳ
ಕಣ್ಣಕಾಂತಿ ಚಿಗುರಿ ಹರಡಿದ ಬೆಳದಿಂಗಳು
ಮನದ ಮರದ ತುಂಬೆಲ್ಲ ಟೊಂಗೆ
ಟೊಂಗೆಗೆ ಮಿಂಚು ಹುಳುಗಳ ಮಿಣಿಮಿಣಿ ಭಾವ.

ಈ ಬಾವಿಕಟ್ಟೆಯ ತುಂಬಾ
ಅವಳ ಅನಂತ ಆಕಾಶ ಥಳಥಳ
ಹೊಳೆದ ಸೂರ್ಯ ಪ್ರೀತಿ ಮೊಗೆದು
ಹಬ್ಬಿ ಹದವಾಗಿ ಮುದವಾಗಿ ಅರಳಿದ
ಸಂಪಿಗೆ ಸೂಸಿತು ಸೀರೆಯ ಸರಭರ ಸಖೀ ಗೀತೆ.

ಹಿಮಗಿರಿಯ ಗಂಗೆ ಹರಿದ ಸೋಪಾನ
ಬಯಲು ಬೆಟ್ಟ ನದಿ ಕಾಡ ತುಂಬ
ಅರಿವು ಭಕ್ತಿ ಪ್ರೀತಿಗೆ ಒಲಿದ ಅವಳ
ಪ್ರೇಮ ಕಾವ್ಯ ಸಾಕಾರ ಹನಿ ಹನಿ
ಉಣಿಸಿದ ಬದುಕು ತಂಪು ಹೊಸ ಕಾವ್ಯ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...