ಹಿತ್ತಲಲ್ಲಿ ಅಮ್ಮ

ಬೀಜ ಬಿತ್ತಿದ ಅಮ್ಮನ ಹಿತ್ತಲಲಿ
ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ
ಅರಳಿ ಘಮ್ಮೆಂದು ಸೂಸಿ ನೆಲತುಂಬ
ಹರಡಿ ಹಾಸಿದ ಪಾರಿಜಾತ ಹೂರಾಶಿ.

ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ
ಮೂಡಿವೆ ಅವಳ ಕೈ ಬೆರಳ ಬಳೆಗಳ
ಚಿಕ್ಕೀ ನಾದ ರೇಖೆಗಳು ಚಿತ್ತ ಪಟ
ಪಾತರಗಿತ್ತಿಗಳ ಹಾರಾಟ ಎದೆಯೊಳಕೆ ಇಳಿದ ರಸಕಾವ್ಯ.

ಇಲ್ಲಿಯೇ ಇದ್ದ ತುಳಸಿ ಕಟ್ಟೆಯ
ಬಳಿ ಉರಿದ ನಂದಾದೀಪ ಅವಳ
ಕಣ್ಣಕಾಂತಿ ಚಿಗುರಿ ಹರಡಿದ ಬೆಳದಿಂಗಳು
ಮನದ ಮರದ ತುಂಬೆಲ್ಲ ಟೊಂಗೆ
ಟೊಂಗೆಗೆ ಮಿಂಚು ಹುಳುಗಳ ಮಿಣಿಮಿಣಿ ಭಾವ.

ಈ ಬಾವಿಕಟ್ಟೆಯ ತುಂಬಾ
ಅವಳ ಅನಂತ ಆಕಾಶ ಥಳಥಳ
ಹೊಳೆದ ಸೂರ್ಯ ಪ್ರೀತಿ ಮೊಗೆದು
ಹಬ್ಬಿ ಹದವಾಗಿ ಮುದವಾಗಿ ಅರಳಿದ
ಸಂಪಿಗೆ ಸೂಸಿತು ಸೀರೆಯ ಸರಭರ ಸಖೀ ಗೀತೆ.

ಹಿಮಗಿರಿಯ ಗಂಗೆ ಹರಿದ ಸೋಪಾನ
ಬಯಲು ಬೆಟ್ಟ ನದಿ ಕಾಡ ತುಂಬ
ಅರಿವು ಭಕ್ತಿ ಪ್ರೀತಿಗೆ ಒಲಿದ ಅವಳ
ಪ್ರೇಮ ಕಾವ್ಯ ಸಾಕಾರ ಹನಿ ಹನಿ
ಉಣಿಸಿದ ಬದುಕು ತಂಪು ಹೊಸ ಕಾವ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿಕ್ಷಣದ ಭಾಷೆ ಯಾವುದಿರಬೇಕು?
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೯

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…