ಕಂದ ಕೃಷ್ಣ

ತೇಲಿದ ಮೋಡಗಳ ನೀಲಿ
ಶಬ್ಧಗಳ ಗುಂಗುಗಳ ಹಿಡಿದು
ಹರಡಿ ಹಾಸಿದ ನೀಲಿ ಕಡಲ ಬಣ್ಣ
ಕಂಪು ಸೂಸಿ ಎಲ್ಲಾ ಹೂಗಳ ತುಂಟ
ಕಣ್ಣುಗಳ ನೋಟದಲಿ ಅರಳಿ ತೇಲಿ
ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ
ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ
ಬೆನ್ನು ಬಿಡದೆ ಬೆಂಬತ್ತಿ ಬಂದಾಗ
ಎದೆಯ ತುಂಬೆಲ್ಲಾ ಅರಬೀ ಸಮುದ್ರ ಉಕ್ಕಿ ಉಕ್ಕಿ
ನಾನೀಗ ಯಶೋಧೆ.
“ವಜ್ರ ವೈಢೂರ್ಯ ಬೇಡ ನನಗೆ
ತುಪ್ಪದ ಅಪ್ಪ ಸೇರದೆ ನಗೆ
ಎತ್ತಿ ದಾರತಿ ತುಂಬಾ ಬೆಳಕು ಕಳವಳದ
ಸಂಜೆ ರಾತ್ರಿಗಳು ನಿಟ್ಟಿಸಿದ ಕಣ್ಣುಗಳ ಸಾವಿರಾರು
ಹೈರಾಣ ಮಾಡಿದೆ ಕುದಿದ ಸೆಖೆ
ಬಯಲ ತಪ್ಪಲಲ್ಲಿ ನನ್ನ ಕೊಳಲಿನ ಕರೆಗೆ
ನರ್ತಿಸಲಿ ನವಿಲು ಅಲ್ಲಿ ಆಡಲಿ, ಕುಚೇಲ
ಚನ್ನಿದಾಂಡು, ಮತ್ತೆ ಗಿಲಿ ಗಿಲಿ ಗೆಜ್ಜೆಯನಾದ
ಗೋಪಿಕೆಯರು ಜೊತೆಗೂಡಲು ಋಷಿಯಲಿ,
ಅಮ್ಮ ಎತ್ತಿಕೊಳ್ಳು ಈಗಲೇ ಈಗಿಂದೀಗಲೇ.”
ಅವನೀಗ ಯಶೋಧೆ ಕಂದ.

ಎಲ್ಲ ರಾಗಗಳು ನದಿಯಾಗಿ ಹರಿದು
ಬಯಲು ತುಂಬ ಹಸಿರು ತಂಬೆಲರು
ಬೆಳ್ಳಗೆ ಬೆಳ್ಳಿಗೆರೆಯಲಿ. ತೇಲಿದ ಬೆಳ್ಳಕ್ಕಿ ಹಿಂಡು
ನೀಲ ಬಾನ ತುಂಬ ತುಂಟರು ಹಾಸಿದ ಬಣ್ಣದ
ಗಾಳಿ ಪಟಗಳು ಅರಳಿದ ಕಣ್ಣುಗಳಲಿ
ಜಗದ ವಿಸ್ಮಯ ಬಯಲು ಸೀಮೆಯ
ಹೊಲಗಳ ಬದುಕಿನ ತುಂಬ ಇವನ
ರಾಗ ಪಲ್ಲಕ್ಕಿ ಹಕ್ಕಿ ಸಾಲು ತೇಲಿ ಜಂಗಮದಲಿ
ಮುರಳಿ ಲೋಲನ ಕಂಪನಗಳ ರಾಗಗಳು
ದೇವಕಿ ನಂದನೀಗ ಯಶೋಧೆ ಕಂದ.

ಫರ್ಮಾನುಗಳ ಹೊರಡಿಸಿವೆ ಅಷ್ಟ ಮಠಗಳು
ಅಷ್ಟದಿಕ್ಕುಗಳಿಗೆ ಎಲ್ಲ ಇಹ ಪರದ ಗೌಜು
ಗದ್ದಲಗಳ ಮಧ್ಯೆ ಬಯಲಲ್ಲಿ ಅವನೀಗ
ಸುಮ್ಮನೆ ಮಣ್ಣಿನಲಿ ಆಡಿ ಮೈಕೈಯಲ್ಲಾ
ಧೂಳು ಕೆಸರು ಬೆತ್ತಲೆ ಬಯಲಲ್ಲಿ
ನಿಲ್ಲಿಸಿ ತಣ್ಣನೆಯ ಗಾಳಿ ಹೊತ್ತ ಪಂಚನದಿಗಳ
ನೀರು ಹೊಯ್ಯುತ್ತಿರುವ ಯಶೋಧೆ.
ಅವನೀಗ ಮರೆತು ಬಿಟ್ಟಿದ್ದಾನೆ. ಉಕ್ಕುವ ಸಮುದ್ರ
ಬಣ್ಣದ ಬೋರಂಗಿ ಹಿಡಿದು ಹಾರಿಸುತ್ತಿದ್ದಾನೆ. ಸುಮ್ಮನೆ. ಝಮ್ಮನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಕಾಶದಲ್ಲೊಂದು ವಾಯುಮಾಪನ ಕಾರ್ಯಾಲಯ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೭೬

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys