Home / ಕವನ / ಕವಿತೆ / ಕಂದ ಕೃಷ್ಣ

ಕಂದ ಕೃಷ್ಣ

ತೇಲಿದ ಮೋಡಗಳ ನೀಲಿ
ಶಬ್ಧಗಳ ಗುಂಗುಗಳ ಹಿಡಿದು
ಹರಡಿ ಹಾಸಿದ ನೀಲಿ ಕಡಲ ಬಣ್ಣ
ಕಂಪು ಸೂಸಿ ಎಲ್ಲಾ ಹೂಗಳ ತುಂಟ
ಕಣ್ಣುಗಳ ನೋಟದಲಿ ಅರಳಿ ತೇಲಿ
ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ
ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ
ಬೆನ್ನು ಬಿಡದೆ ಬೆಂಬತ್ತಿ ಬಂದಾಗ
ಎದೆಯ ತುಂಬೆಲ್ಲಾ ಅರಬೀ ಸಮುದ್ರ ಉಕ್ಕಿ ಉಕ್ಕಿ
ನಾನೀಗ ಯಶೋಧೆ.
“ವಜ್ರ ವೈಢೂರ್ಯ ಬೇಡ ನನಗೆ
ತುಪ್ಪದ ಅಪ್ಪ ಸೇರದೆ ನಗೆ
ಎತ್ತಿ ದಾರತಿ ತುಂಬಾ ಬೆಳಕು ಕಳವಳದ
ಸಂಜೆ ರಾತ್ರಿಗಳು ನಿಟ್ಟಿಸಿದ ಕಣ್ಣುಗಳ ಸಾವಿರಾರು
ಹೈರಾಣ ಮಾಡಿದೆ ಕುದಿದ ಸೆಖೆ
ಬಯಲ ತಪ್ಪಲಲ್ಲಿ ನನ್ನ ಕೊಳಲಿನ ಕರೆಗೆ
ನರ್ತಿಸಲಿ ನವಿಲು ಅಲ್ಲಿ ಆಡಲಿ, ಕುಚೇಲ
ಚನ್ನಿದಾಂಡು, ಮತ್ತೆ ಗಿಲಿ ಗಿಲಿ ಗೆಜ್ಜೆಯನಾದ
ಗೋಪಿಕೆಯರು ಜೊತೆಗೂಡಲು ಋಷಿಯಲಿ,
ಅಮ್ಮ ಎತ್ತಿಕೊಳ್ಳು ಈಗಲೇ ಈಗಿಂದೀಗಲೇ.”
ಅವನೀಗ ಯಶೋಧೆ ಕಂದ.

ಎಲ್ಲ ರಾಗಗಳು ನದಿಯಾಗಿ ಹರಿದು
ಬಯಲು ತುಂಬ ಹಸಿರು ತಂಬೆಲರು
ಬೆಳ್ಳಗೆ ಬೆಳ್ಳಿಗೆರೆಯಲಿ. ತೇಲಿದ ಬೆಳ್ಳಕ್ಕಿ ಹಿಂಡು
ನೀಲ ಬಾನ ತುಂಬ ತುಂಟರು ಹಾಸಿದ ಬಣ್ಣದ
ಗಾಳಿ ಪಟಗಳು ಅರಳಿದ ಕಣ್ಣುಗಳಲಿ
ಜಗದ ವಿಸ್ಮಯ ಬಯಲು ಸೀಮೆಯ
ಹೊಲಗಳ ಬದುಕಿನ ತುಂಬ ಇವನ
ರಾಗ ಪಲ್ಲಕ್ಕಿ ಹಕ್ಕಿ ಸಾಲು ತೇಲಿ ಜಂಗಮದಲಿ
ಮುರಳಿ ಲೋಲನ ಕಂಪನಗಳ ರಾಗಗಳು
ದೇವಕಿ ನಂದನೀಗ ಯಶೋಧೆ ಕಂದ.

ಫರ್ಮಾನುಗಳ ಹೊರಡಿಸಿವೆ ಅಷ್ಟ ಮಠಗಳು
ಅಷ್ಟದಿಕ್ಕುಗಳಿಗೆ ಎಲ್ಲ ಇಹ ಪರದ ಗೌಜು
ಗದ್ದಲಗಳ ಮಧ್ಯೆ ಬಯಲಲ್ಲಿ ಅವನೀಗ
ಸುಮ್ಮನೆ ಮಣ್ಣಿನಲಿ ಆಡಿ ಮೈಕೈಯಲ್ಲಾ
ಧೂಳು ಕೆಸರು ಬೆತ್ತಲೆ ಬಯಲಲ್ಲಿ
ನಿಲ್ಲಿಸಿ ತಣ್ಣನೆಯ ಗಾಳಿ ಹೊತ್ತ ಪಂಚನದಿಗಳ
ನೀರು ಹೊಯ್ಯುತ್ತಿರುವ ಯಶೋಧೆ.
ಅವನೀಗ ಮರೆತು ಬಿಟ್ಟಿದ್ದಾನೆ. ಉಕ್ಕುವ ಸಮುದ್ರ
ಬಣ್ಣದ ಬೋರಂಗಿ ಹಿಡಿದು ಹಾರಿಸುತ್ತಿದ್ದಾನೆ. ಸುಮ್ಮನೆ. ಝಮ್ಮನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...