Home / ಕವನ / ಕವಿತೆ / ಕಂದ ಕೃಷ್ಣ

ಕಂದ ಕೃಷ್ಣ

ತೇಲಿದ ಮೋಡಗಳ ನೀಲಿ
ಶಬ್ಧಗಳ ಗುಂಗುಗಳ ಹಿಡಿದು
ಹರಡಿ ಹಾಸಿದ ನೀಲಿ ಕಡಲ ಬಣ್ಣ
ಕಂಪು ಸೂಸಿ ಎಲ್ಲಾ ಹೂಗಳ ತುಂಟ
ಕಣ್ಣುಗಳ ನೋಟದಲಿ ಅರಳಿ ತೇಲಿ
ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ
ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ
ಬೆನ್ನು ಬಿಡದೆ ಬೆಂಬತ್ತಿ ಬಂದಾಗ
ಎದೆಯ ತುಂಬೆಲ್ಲಾ ಅರಬೀ ಸಮುದ್ರ ಉಕ್ಕಿ ಉಕ್ಕಿ
ನಾನೀಗ ಯಶೋಧೆ.
“ವಜ್ರ ವೈಢೂರ್ಯ ಬೇಡ ನನಗೆ
ತುಪ್ಪದ ಅಪ್ಪ ಸೇರದೆ ನಗೆ
ಎತ್ತಿ ದಾರತಿ ತುಂಬಾ ಬೆಳಕು ಕಳವಳದ
ಸಂಜೆ ರಾತ್ರಿಗಳು ನಿಟ್ಟಿಸಿದ ಕಣ್ಣುಗಳ ಸಾವಿರಾರು
ಹೈರಾಣ ಮಾಡಿದೆ ಕುದಿದ ಸೆಖೆ
ಬಯಲ ತಪ್ಪಲಲ್ಲಿ ನನ್ನ ಕೊಳಲಿನ ಕರೆಗೆ
ನರ್ತಿಸಲಿ ನವಿಲು ಅಲ್ಲಿ ಆಡಲಿ, ಕುಚೇಲ
ಚನ್ನಿದಾಂಡು, ಮತ್ತೆ ಗಿಲಿ ಗಿಲಿ ಗೆಜ್ಜೆಯನಾದ
ಗೋಪಿಕೆಯರು ಜೊತೆಗೂಡಲು ಋಷಿಯಲಿ,
ಅಮ್ಮ ಎತ್ತಿಕೊಳ್ಳು ಈಗಲೇ ಈಗಿಂದೀಗಲೇ.”
ಅವನೀಗ ಯಶೋಧೆ ಕಂದ.

ಎಲ್ಲ ರಾಗಗಳು ನದಿಯಾಗಿ ಹರಿದು
ಬಯಲು ತುಂಬ ಹಸಿರು ತಂಬೆಲರು
ಬೆಳ್ಳಗೆ ಬೆಳ್ಳಿಗೆರೆಯಲಿ. ತೇಲಿದ ಬೆಳ್ಳಕ್ಕಿ ಹಿಂಡು
ನೀಲ ಬಾನ ತುಂಬ ತುಂಟರು ಹಾಸಿದ ಬಣ್ಣದ
ಗಾಳಿ ಪಟಗಳು ಅರಳಿದ ಕಣ್ಣುಗಳಲಿ
ಜಗದ ವಿಸ್ಮಯ ಬಯಲು ಸೀಮೆಯ
ಹೊಲಗಳ ಬದುಕಿನ ತುಂಬ ಇವನ
ರಾಗ ಪಲ್ಲಕ್ಕಿ ಹಕ್ಕಿ ಸಾಲು ತೇಲಿ ಜಂಗಮದಲಿ
ಮುರಳಿ ಲೋಲನ ಕಂಪನಗಳ ರಾಗಗಳು
ದೇವಕಿ ನಂದನೀಗ ಯಶೋಧೆ ಕಂದ.

ಫರ್ಮಾನುಗಳ ಹೊರಡಿಸಿವೆ ಅಷ್ಟ ಮಠಗಳು
ಅಷ್ಟದಿಕ್ಕುಗಳಿಗೆ ಎಲ್ಲ ಇಹ ಪರದ ಗೌಜು
ಗದ್ದಲಗಳ ಮಧ್ಯೆ ಬಯಲಲ್ಲಿ ಅವನೀಗ
ಸುಮ್ಮನೆ ಮಣ್ಣಿನಲಿ ಆಡಿ ಮೈಕೈಯಲ್ಲಾ
ಧೂಳು ಕೆಸರು ಬೆತ್ತಲೆ ಬಯಲಲ್ಲಿ
ನಿಲ್ಲಿಸಿ ತಣ್ಣನೆಯ ಗಾಳಿ ಹೊತ್ತ ಪಂಚನದಿಗಳ
ನೀರು ಹೊಯ್ಯುತ್ತಿರುವ ಯಶೋಧೆ.
ಅವನೀಗ ಮರೆತು ಬಿಟ್ಟಿದ್ದಾನೆ. ಉಕ್ಕುವ ಸಮುದ್ರ
ಬಣ್ಣದ ಬೋರಂಗಿ ಹಿಡಿದು ಹಾರಿಸುತ್ತಿದ್ದಾನೆ. ಸುಮ್ಮನೆ. ಝಮ್ಮನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...