Home / ಕವನ / ಕವಿತೆ / ಕಂದ ಕೃಷ್ಣ

ಕಂದ ಕೃಷ್ಣ

ತೇಲಿದ ಮೋಡಗಳ ನೀಲಿ
ಶಬ್ಧಗಳ ಗುಂಗುಗಳ ಹಿಡಿದು
ಹರಡಿ ಹಾಸಿದ ನೀಲಿ ಕಡಲ ಬಣ್ಣ
ಕಂಪು ಸೂಸಿ ಎಲ್ಲಾ ಹೂಗಳ ತುಂಟ
ಕಣ್ಣುಗಳ ನೋಟದಲಿ ಅರಳಿ ತೇಲಿ
ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ
ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ
ಬೆನ್ನು ಬಿಡದೆ ಬೆಂಬತ್ತಿ ಬಂದಾಗ
ಎದೆಯ ತುಂಬೆಲ್ಲಾ ಅರಬೀ ಸಮುದ್ರ ಉಕ್ಕಿ ಉಕ್ಕಿ
ನಾನೀಗ ಯಶೋಧೆ.
“ವಜ್ರ ವೈಢೂರ್ಯ ಬೇಡ ನನಗೆ
ತುಪ್ಪದ ಅಪ್ಪ ಸೇರದೆ ನಗೆ
ಎತ್ತಿ ದಾರತಿ ತುಂಬಾ ಬೆಳಕು ಕಳವಳದ
ಸಂಜೆ ರಾತ್ರಿಗಳು ನಿಟ್ಟಿಸಿದ ಕಣ್ಣುಗಳ ಸಾವಿರಾರು
ಹೈರಾಣ ಮಾಡಿದೆ ಕುದಿದ ಸೆಖೆ
ಬಯಲ ತಪ್ಪಲಲ್ಲಿ ನನ್ನ ಕೊಳಲಿನ ಕರೆಗೆ
ನರ್ತಿಸಲಿ ನವಿಲು ಅಲ್ಲಿ ಆಡಲಿ, ಕುಚೇಲ
ಚನ್ನಿದಾಂಡು, ಮತ್ತೆ ಗಿಲಿ ಗಿಲಿ ಗೆಜ್ಜೆಯನಾದ
ಗೋಪಿಕೆಯರು ಜೊತೆಗೂಡಲು ಋಷಿಯಲಿ,
ಅಮ್ಮ ಎತ್ತಿಕೊಳ್ಳು ಈಗಲೇ ಈಗಿಂದೀಗಲೇ.”
ಅವನೀಗ ಯಶೋಧೆ ಕಂದ.

ಎಲ್ಲ ರಾಗಗಳು ನದಿಯಾಗಿ ಹರಿದು
ಬಯಲು ತುಂಬ ಹಸಿರು ತಂಬೆಲರು
ಬೆಳ್ಳಗೆ ಬೆಳ್ಳಿಗೆರೆಯಲಿ. ತೇಲಿದ ಬೆಳ್ಳಕ್ಕಿ ಹಿಂಡು
ನೀಲ ಬಾನ ತುಂಬ ತುಂಟರು ಹಾಸಿದ ಬಣ್ಣದ
ಗಾಳಿ ಪಟಗಳು ಅರಳಿದ ಕಣ್ಣುಗಳಲಿ
ಜಗದ ವಿಸ್ಮಯ ಬಯಲು ಸೀಮೆಯ
ಹೊಲಗಳ ಬದುಕಿನ ತುಂಬ ಇವನ
ರಾಗ ಪಲ್ಲಕ್ಕಿ ಹಕ್ಕಿ ಸಾಲು ತೇಲಿ ಜಂಗಮದಲಿ
ಮುರಳಿ ಲೋಲನ ಕಂಪನಗಳ ರಾಗಗಳು
ದೇವಕಿ ನಂದನೀಗ ಯಶೋಧೆ ಕಂದ.

ಫರ್ಮಾನುಗಳ ಹೊರಡಿಸಿವೆ ಅಷ್ಟ ಮಠಗಳು
ಅಷ್ಟದಿಕ್ಕುಗಳಿಗೆ ಎಲ್ಲ ಇಹ ಪರದ ಗೌಜು
ಗದ್ದಲಗಳ ಮಧ್ಯೆ ಬಯಲಲ್ಲಿ ಅವನೀಗ
ಸುಮ್ಮನೆ ಮಣ್ಣಿನಲಿ ಆಡಿ ಮೈಕೈಯಲ್ಲಾ
ಧೂಳು ಕೆಸರು ಬೆತ್ತಲೆ ಬಯಲಲ್ಲಿ
ನಿಲ್ಲಿಸಿ ತಣ್ಣನೆಯ ಗಾಳಿ ಹೊತ್ತ ಪಂಚನದಿಗಳ
ನೀರು ಹೊಯ್ಯುತ್ತಿರುವ ಯಶೋಧೆ.
ಅವನೀಗ ಮರೆತು ಬಿಟ್ಟಿದ್ದಾನೆ. ಉಕ್ಕುವ ಸಮುದ್ರ
ಬಣ್ಣದ ಬೋರಂಗಿ ಹಿಡಿದು ಹಾರಿಸುತ್ತಿದ್ದಾನೆ. ಸುಮ್ಮನೆ. ಝಮ್ಮನೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...